ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Sampriya
ಗುರುವಾರ, 28 ಆಗಸ್ಟ್ 2025 (14:17 IST)
Photo Credit X
ಮೈಸೂರು: ಚಾಮುಂಟಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ ನಡೆದಿರುವ ರಾಜಕೀಯ ಬೆಳವಣಿಗೆಯಿಂದ ಬೇಸರವಾಗಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್  ಹೇಳಿದ್ದಾರೆ. 

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ವರ್ಷದ ದಸರಾ ಆಚರಣೆಯ ಬೆಳವಣಿಗೆಗಳು ಕಳವಳಕಾರಿಯಾಗಿದೆ. ದಸರಾ ಆಚರಣೆಗಳು, ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯವು ನಡೆಯುತ್ತಿರುವುದು ತೀವ್ರ ಬೇಸರ ತರಿಸಿದೆ. ಆದ್ದರಿದಿಂದ ನಾನು ಈ ಪತ್ರ ಬರೆಯುತ್ತಿದ್ದೇನೆ.

ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು.

ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತರುತ್ತಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಸರ್ಕಾರದ ದಸರಾವು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಪರಿಗಣಿತ ಅಭಿಪ್ರಾಯ. ರಾಜ್ಯವು ಅದರ ಸ್ವಭಾವತಃ, ಅಂತಹ ಉತ್ಸವವನ್ನು ನಡೆಸುವಲ್ಲಿ ಧಾರ್ಮಿಕ ಪಾವಿತ್ರ್ಯ ಸಂಪ್ರದಾಯ ಅಥವಾ ಪರಂಪರೆಯನ್ನು ಪಡೆಯಲು ಸಾಧ್ಯವಿಲ್ಲ.

ಗಣೇಶ ಚತುರ್ಥಿಯ ಆಚರಣೆಯು ಎಲ್ಲಾ ಅಡೆತಡೆಗಳು, ತಪ್ಪು ಕಲ್ಪನೆಗಳು ಮತ್ತು ಸಂಘರ್ಷಗಳನ್ನು ನಿವಾರಿಸುತ್ತದೆ ಮತ್ತು ಶೀಘ್ರದಲ್ಲೇ ಒಮ್ಮತವನ್ನು ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments