Webdunia - Bharat's app for daily news and videos

Install App

ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶ

Webdunia
ಸೋಮವಾರ, 5 ನವೆಂಬರ್ 2018 (15:17 IST)
ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶವಿದೆ. ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು. ಹೀಗಾಗಿ ದೇವಾಲಯದ ಕಟ್ಟು ಪಾಡಿನಲ್ಲಿ  ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ ಮಾಡಲಾಗಿದೆ. ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ ಮಾಡಲಾಗಿದೆ. ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ  ಕುಲಶೇಖರ್ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದಿದ್ದಾರೆ.
ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ  70 ಸಾವಿರಕ್ಕೂ ಅಧಿಕ ಭಕ್ತರು ಪ್ರತಿವರ್ಷ ದರ್ಶನ ಪಡೆಯುತ್ತಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments