Webdunia - Bharat's app for daily news and videos

Install App

ಕೊಡಗು ನಿರಾಶ್ರಿತರಿಗೆ 11 ಕ್ವಿಂಟಲ್ ಮಾದಲಿ ತಯಾರಿಸಿದ ಭಕ್ತರು

Webdunia
ಶುಕ್ರವಾರ, 24 ಆಗಸ್ಟ್ 2018 (20:17 IST)
ನಿರಾಶ್ರಿತ ತಾಣಗಳಿಗೆ 11 ಕ್ವಿಂಟಾಲ್ ಗೋದಿ ಹಿಟ್ಟಿನ ಮಾದಲಿ, 11 ಚೀಲ ಚುನಮರಿ ಚೂಡಾ, 10 ಬಾಕ್ಸ್ ಬಿಸ್ಕೇಟ್ ಬಾಕ್ಸಗಳನ್ನು ಶ್ರೀಮಠದಿಂದ ಕಳುಹಿಸಲಾಯಿತು.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ ಮಠದ  ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಸ್ವಾಮೀಜಿಯವರು ರಾಜ್ಯದ ಕೊಡಗು, ಮಡಕೇರಿ ಹಾಗೂ ಕೇರಳ ರಾಜ್ಯದಲ್ಲಿ ಅತೀವೃಷ್ಠಿಯಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿರುವ ಹಿನ್ನೆಲೆಯಲ್ಲಿ ಸಂತ್ರಸ್ಥರ ನೆರವಿಗೆ ಮುಂದಾಗಿದ್ದಾರೆ. ಮುಗಳಖೋಡದ ಶ್ರೀಮಠದಿಂದ ನಿರಾಶ್ರಿತ ತಾಣಗಳಿಗೆ 11 ಕ್ವಿಂಟಾಲ್ ಗೋದಿ ಹಿಟ್ಟಿನ ಮಾದಲಿ, 11 ಚೀಲ ಚುನಮರಿ ಚೂಡಾ, 10 ಬಾಕ್ಸ್ ಬಿಸ್ಕೇಟ್ ಬಾಕ್ಸಗಳನ್ನು ಕಳುಹಿಸಲಾಯಿತು. ಶ್ರೀಗಳು ಕೊಟ್ಟ ಕರೆಗೆ ಸ್ವಯಂ ಪ್ರೇರಿತರಾಗಿ ಬಂದ ಭಕ್ತ ಸಮೂಹ ಆಹಾರ ಪದಾರ್ಥಗಳನ್ನು ತಯಾರಿಸುವುದಲ್ಲಿ ಪಾಲ್ಗೊಂಡರು.

ದಾಸೋಹದ ಮಹಾಮನೆಯಲ್ಲಿ ಪಂಚಾಕ್ಷರಿ ಮಂತ್ರದೊಂದಿಗೆ ಖಾದ್ಯಗಳ ತಯಾರಿ ಸಾಂಗವಾಗಿ ನಡೆಯಿತು. ಈ ಹಿಂದೆಯೂ ಕೂಡ ನಿರಾಶ್ರಿತರಿಗೆ ಶ್ರೀಗಳು ಸಹಾಯ ಹಸ್ತ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ದಾಸೋಹವನ್ನೆ ಮೂಲ ಮಂತ್ರವನ್ನಾಗಿಸಿಕೊಂಡ ಮುಗಳಖೋಡದ ಮಠ ಕಷ್ಟದಲ್ಲಿ ಇರುವ ಜನರಿಗೆ ಮಾತೃ ಸ್ವರೂಪವಾಗಿ ಕಂಗೊಳಿಸುತ್ತ ಬಸವಾದಿ ಪ್ರಥಮರ ವಾಣಿಯಂತೆ "ದಯವೇ ಧರ್ಮದ ಮೂಲವಯ್ಯ" ಎಂಬ  ತಾತ್ವಿಕ ಚಿಂತನೆಯನ್ನು ಕಾರ್ಯರೂಪಕ್ಕೆ ತರುವುದರಲ್ಲಿ ಯಶಸ್ವಿಯಾಗಿದ್ದು, ಇದಕ್ಕೆ ಭಕ್ತರು ಸಾಥ್ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments