Webdunia - Bharat's app for daily news and videos

Install App

ಲಾಕ್ ಡೌನ್ ಎಫೆಕ್ಟ್ : ಗಾಣಗಾಪುರ ದತ್ತಾತ್ರೇಯ ಗುಡಿಯಲ್ಲೇ ಭಕ್ತರ ವಾಸ್ತವ್ಯ

Webdunia
ಮಂಗಳವಾರ, 21 ಏಪ್ರಿಲ್ 2020 (17:34 IST)
ಲಾಕ್ ಡೌನ್ ಪರಿಣಾಮ ಪ್ರಸಿದ್ಧ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಗುಡಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ರಾಜಸ್ತಾನದ ವಲಸೆ ಕಾರ್ಮಿಕರು ತಂಗಿರುವ ಕಲಬುರಗಿ ಜಿಲ್ಲೆಯ ಅಫಜಲಪೂರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದ ಕಾರ್ಮಿಕರ ನಿರಾಶ್ರಿತರ ಕೇಂದ್ರಕ್ಕೆ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಕಾರ್ಮಿಕರ ನೋಡಲ್ ಅಧಿಕಾರಿ ಶ್ರೀಹರಿ ದೇಶಪಾಂಡೆ ಭೇಡಿ ನೀಡಿ ಕಾರ್ಮಿಕರ ಸಮಸ್ಯೆ‌ ಆಲಿಸಿದರು.
ತದನಂತರ ಧಾರ್ಮಿಕ ಸ್ಥಾನವಾದ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೂ ಭೇಟಿ‌ ನೀಡಿ ಅಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

ಶ್ರೀ ದತ್ತಾತ್ರೇಯನ ದರ್ಶನಕ್ಕೆ ಬಂದು ಲಾಕ್ ಡೌನ್ ಪರಿಣಾಮ ಇಲ್ಲಿಯೆ ಉಳಿದಿರುವ ಮಹಾರಾಷ್ಟ್ರದ ಯಾವತಮಾಳ ಗ್ರಾಮದ 6 ಸದಸ್ಯರ ಕುಟುಂಬವನ್ನು ಭೇಟಿ ಮಾಡಿದ ಶ್ರೀಹರಿ ದೇಶಪಾಂಡೆ, ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಲುವಂತೆ ತಿಳಿಸಿದರು.

ಭಕ್ತಾಧಿಗಳು ತಮ್ಮ ಊರಿಗೆ ಹೋಗಲು ವ್ಯವಸ್ಥೆ ಮಾಡುವಂತೆ ಕೇಳಿಕೊಂಡರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಯಾಣ ಸಾಧ್ಯವಿಲ್ಲ. ತಮಗೆ ಬೇಕಾದ ಎಲ್ಲಾ ಅವಶ್ಯಕ ವಸ್ತುಗಳ ಪೂರೈಸಲಾಗುವುದು ಎಂದು ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments