Webdunia - Bharat's app for daily news and videos

Install App

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

Krishnaveni K
ಸೋಮವಾರ, 21 ಏಪ್ರಿಲ್ 2025 (09:28 IST)
Photo Credit: X
ಬೆಂಗಳೂರು: ಕರ್ನಾಟಕ ಮಾಜಿ ಡಿಜಿಪಿ ಓಂ ಪ್ರಕಾಶ್ ರಾವ್ ಹತ್ಯೆಯಾಗಿದ್ದು ಹೇಗೆ ಎಂದು ಪೊಲೀಸ್ ವಶದಲ್ಲಿರುವ ಪತ್ನಿ ಪಲ್ಲವಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಡಿಜಿಪಿ ಓಂ ಪ್ರಕಾಶ್ ರಾವ್ ಹತ್ಯೆಯಾದ ಬೆನ್ನಲ್ಲೇ ಅವರ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ವಶಕ್ಕೆ ಪಡೆಯಲಾಗಿತ್ತು. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಬಲವಾದ ಅನುಮಾನವಿತ್ತು. ಹೀಗಾಗಿ ಅವರನ್ನು ವಶಪಡಿಸಿ ವಿಚಾರಣೆಗೊಳಪಡಿಸಲಾಗಿತ್ತು.

ಇದೀಗ ಪಲ್ಲವಿ ಪೊಲೀಸ್ ವಿಚಾರಣೆ ವೇಳೆ ಹತ್ಯೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕಳೆದ ಒಂದು ವಾರದಿಂದ ಮನೆಯಲ್ಲಿ ನಿತ್ಯವೂ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಿಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ.

ಮಧ್ಯಾಹ್ನದ ವೇಳೆ ಜಗಳ ತಾರಕಕ್ಕೇರಿತ್ತು. ಅವರು ನಮ್ಮನ್ನೇ ಕೊಲೆ ಮಾಡಲು ಯತ್ನಿಸಿದರು. ನಮ್ಮ ಆತ್ಮರಕ್ಷಣೆಗಾಗಿ ಖಾರದ ಪುಡಿ ಅಡುಗೆ ಎಣ್ಣೆ ಹಾಕಿದೆವು. ಬಳಿಕ ಅವರ ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು. ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವನ್ನಪ್ಪಿದ್ದಾರೆ ಎಂದು ಪಲ್ಲವಿ ವಿವರಿಸಿದ್ದಾರೆ.

ಇದೀಗ ಓಂ ಪ್ರಕಾಶ್ ಸಾವಿನಲ್ಲಿ ಮಗಳ ಕೈವಾಡವಿದೆಯೇ ಎಂದೂ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಅಧಿಕೃತವಾಗಿ ಯಾರನ್ನೂ ಬಂಧಿಸಿಲ್ಲ. ಆದರೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments