Webdunia - Bharat's app for daily news and videos

Install App

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

Sampriya
ಮಂಗಳವಾರ, 5 ಆಗಸ್ಟ್ 2025 (15:49 IST)
ಮಂಗಳೂರು: ಧರ್ಮಸ್ಥಳ ಸುತ್ತಾ ಮುತ್ತಾ ಹಲವು ಮೃತದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡವು (ಎಸ್ಐಟಿ) ಮಂಗಳವಾರ ಶೋಧ ಕಾರ್ಯ ಆರಂಭಿಸಿದೆ.

ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಸಮೀಪದಲ್ಲಿರುವ ಹೆದ್ದಾರಿ ಪಕ್ಕದ ಕಾಡಿಗೆ ಎಸ್ಐಟಿ ತಂಡವು ಸಾಕ್ಷಿ ದೂರುದಾರನನ್ನು ಕರೆದೊಯ್ದು ಉತ್ಖನನ ಶುರು ಮಾಡಿದೆ.

ಎಸ್ಐಟಿ ಜೊತೆಗೆ ಸುಮಾರು 20 ಕಾರ್ಮಿಕರು ಶೋಧ ಕಾರ್ಯಕ್ಕೆ ಕಾಡಿನೊಳಗೆ ತೆರಳಿದ್ದಾರೆ. ಅಗೆಯುವ ಯಂತ್ರವನ್ನೂ ಸ್ಥಳಕ್ಕೆ ತರಲಾಗಿದೆ.

ಧರ್ಮಸ್ಥಳದ ಸುತ್ತಾ ಮುತ್ತಾ ಹಲವಾರು ಶವಗಳನ್ನು ಹೂತು ಹಾಕಿದ್ದೇನೆ ಎಮದು  ಸಾಕ್ಷಿ ದೂರುದಾರ 13 ಜಾಗಗಳನ್ನು ತೋರಿಸಿದ್ದ. ಅವುಗಳಲ್ಲಿ 10 ಜಾಗಗಳಲ್ಲಿ ಸೋಮವಾರದವರೆಗೆ ಶೋಧ ಕಾರ್ಯ ನಡೆದಿದೆ. ಸೋಮವಾರ ಆತ ತೋರಿಸಿದ್ದ 11ನೇ ಜಾಗದದಿಂದ ಸುಮಾರು 100 ಮೀ ದೂರದಲ್ಲಿ ನೆಲದ ಮೇಲೆಯೆ ಮೃತದೇಹದ ಅವಶೇಷ ಸಿಕ್ಕಿತ್ತು. ದೂರುದಾರ ತೋರಿಸಿದ್ದ 11ನೇ ಜಾಗವನ್ನು ಮಂಗಳವಾರ ಅಗೆಯಲಾಗುತ್ತಿದೆ. ಈ ಜಾಗವು ಹೆದ್ದಾರಿಯಿಂದ ಸುಮಾರು 20 ಮೀ ದೂರದಲ್ಲಿ ಕಾಡಿನೊಳಗೆ ಇದೆ.

ಗುರುವಾರ ನೇತ್ರಾವದಿ ನದಿ ಪಕ್ಕದ ಕಾಡಿನಲ್ಲಿ ನಡೆದ ಕಳೇಬರಹ ಉತ್ಖನನದಲ್ಲಿ 6ನೇ ಪಾಯಿಂಟ್‌ನಲ್ಲಿ ಪುರುಷನ ಮೃತದೇಹದ ಮೂಳೆಗಳು ಪತ್ತೆಯಾಗಿತ್ತು. ಉಳಿದ ಒಂಬತ್ತು ಜಾಗಗಳಲ್ಲಿ ಅಗೆದಾಗ ಮೃತದೇಹದ ಯಾವುದೇ ಕುರುಹುಗಳು ಸಿಕ್ಕಿಲ್ಲ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments