Webdunia - Bharat's app for daily news and videos

Install App

ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ, ನಮಗೂ ಒಂದು ಕಾಲ ಬರುತ್ತದೆ: ಸಿ.ಟಿ. ರವಿ ಆಕ್ರೋಶ

Sampriya
ಶುಕ್ರವಾರ, 20 ಡಿಸೆಂಬರ್ 2024 (15:16 IST)
ಬೆಳಗಾವಿ: ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಬೆಳಗಾವಿ ಐದನೇ ಜೆಎಂಎಫ್ ಸಿ ನ್ಯಾಯಾಲಯದ ಹೊರಗಡೆ ಬರುವ ಸಂದರ್ಭದಲ್ಲಿ ಇಂದು ಮಾತನಾಡಿದ ಸಿ.ಟಿ.ರವಿ, ನನ್ನನ್ನು ರಾತ್ರಿಯಡಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದಾರೆ. ಯಾವುದೇ ನೋಟೀಸ್ ನೀಡಿಲ್ಲ ಎಂದು ಆರೋಪಿಸಿದರು.

ಅಕ್ರಮವಾಗಿ ಬಂಧನ ಮಾಡಿ ರಾತ್ರಿಯಿಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ ಸರ್ವಾಧಿಕಾರಿ ಧೋರಣೆ ಮೆರೆದಿದ್ದಾರೆ. ಹಲ್ಲೆ ಮಾಡಿದ್ದಾರೆ. ಎಲ್ಲದಕ್ಕೂ ಒಂದು ಪೂರ್ಣ ವಿರಾಮ ಇರುತ್ತದೆ. ಇದರಲ್ಲೂ ಪೂರ್ಣ ವಿರಾಮ ಬೀಳುತ್ತದೆ ಎಂದು ಕಿಡಿಕಾರಿದರು.

ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅತ್ತೆಗೊಂದು ಕಾಲ. ಸೊಸೆಗೊಂದು ಕಾಲ. ನಮಗೂ ಒಂದು ಕಾಲ ಬರುತ್ತದೆ ಎಂದು ಸಿ.ಟಿ.ರವಿ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments