Webdunia - Bharat's app for daily news and videos

Install App

ಬಿಜೆಪಿಯವರು ದೇಶಕ್ಕಾಗಿ ಸತ್ತಿದ್ದಾರಾ ? - ಸಿದ್ದರಾಮಯ್ಯ ಪ್ರಶ್ನೆ

Webdunia
ಗುರುವಾರ, 11 ಆಗಸ್ಟ್ 2022 (15:40 IST)
ಸರ್ವಜ್ಞ ನಗರ ಕ್ಷೇತ್ರದಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ನಡಿಗೆಗೆ  ಸಿದ್ದರಾಮಯ್ಯ ಚಾಲನೆ ನೀಡಿದರು.ವಿಧುರಾಶ್ವತ್ಥಕ್ಕೆ ತೆರಳುವುದಕ್ಕೂ ಮೊದಲು ಕೆ.ಜೆ ಜಾರ್ಜ್ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಡಿಗೆಗೆ ಚಾಲನೆ ನೀಡಿದ್ದಾರೆ.ಕೇಸರಿ, ಬಿಳಿ, ಹಸಿರು ಬಣ್ಣದ ಪೇಟ ಸಿದ್ದರಾಮಯ್ಯ ಸಿದ್ದರಾಮಯ್ಯ ಎಲ್ಲರ ಗಮನಸೆಳೆದಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ಇಂದು ನಾವೆಲ್ಲ ಸ್ವತಂತ್ರರಾಗಿದ್ದೇವೆ.ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಕಾರಣ.ದೇಶಕ್ಕಾಗಿ ಸಾವಿರಾರು ಜನ ಪ್ರಾಣ ತ್ಯಾಗ ಮಾಡಿದ್ದಾರೆ.ಆ.೧೫ರಂದು ೭೫ನೇ ಸ್ವಾತಂತ್ರೋತ್ಸವದ ನಡಿಗೆ ಹಮ್ಮಿಕೊಂಡಿದ್ದೇವೆ.ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ.ಬೆಂಗಳೂರು ಸೇರಿದಂತೆ ಬೇರೆ ಬೇರೆ ಭಾಗದ ಜನರು ಭಾಗವಹಿಸುತ್ತಾರೆ.ಬಿಜೆಪಿಯವರು ದೇಶಕ್ಕಾಗಿ ಸತ್ತಿದ್ದಾರಾ ? ಸಾವರ್ಕರ್ ನ್ನ ಬಿಜೆಪಿಯವರು ಹಾಡಿ ಹೊಗಳುತ್ತಾರೆ.ಆದರೆ ಸಾವರ್ಕರ್ ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರ ಬರುತ್ತಾರೆ.ಮಹಾತ್ಮ ಗಾಂಧಿ ಇವರೇನಾದರೂ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದಾರೆ.ಬಿಜೆಪಿಯವರು ನಮಗೆ ದೇಶಭಕ್ತಿ ಬಗ್ಗೆ ಪಾಠ ಹೇಳಿಕೊಡುತ್ತಾರೆ.ಬಿಜೆಪಿಯವರಿಗೆ ಎಂದೂ ದೇಶಭಕ್ತಿ ಇರಲಿಲ್ಲ.ದೇಶಕ್ಕಾಗಿ ಎಂದೂ ಜೈಲಿಗೆ ಹೋದವರಲ್ಲ, ಪ್ರಾಣ ತ್ಯಾಗ ಮಾಡಿದವರಲ್ಲ ಹೆಡ್ಗೇವಾರ್, ಗೋಲ್ವಾಲ್ಕರ್ ದೇಶಕ್ಕಾಗಿ ಹೋರಾಡಿದ್ದಾರಾ ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಅಸಾಮಾಧಾನ ವ್ಯಕ್ತಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments