Webdunia - Bharat's app for daily news and videos

Install App

ಆತುರಪಟ್ಟು ಅಧಿಕಾರಕ್ಕೇರಿದರೇ ಬಿಎಸ್ ಯಡಿಯೂರಪ್ಪ?

Webdunia
ಶನಿವಾರ, 27 ಜುಲೈ 2019 (09:06 IST)
ಬೆಂಗಳೂರು: ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೇರಿದಷ್ಟು ಸುಲಭವಾಗಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗುತ್ತಾ ಎನ್ನುವುದೇ ಎಲ್ಲರ ಪ್ರಶ್ನೆ.


2018 ರಲ್ಲೂ ಹೀಗೇ ಆಗಿತ್ತು. ಯಡಿಯೂರಪ್ಪ ಅಧಿಕಾರಕ್ಕೇರಿದ ಎರಡೇ ದಿನದಲ್ಲಿ ಬಹುಮತ ಸಾಬೀತುಪಡಿಸಲಾಗದೇ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಈಗಲೂ ಬಿಜೆಪಿಗೆ ಸಂಖ್ಯಾ ಬಲವಿಲ್ಲದೇ ಅಧಿಕಾರಕ್ಕೇರಿ ಯಡಿಯೂರಪ್ಪ ಮತ್ತೆ ತಪ್ಪು ಮಾಡಿದರಾ ಎಂಬ ಚರ್ಚೆಯನ್ನು ಜನರೇ ಸೋಷಿಯಲ್ ಮೀಡಿಯಾದಲ್ಲಿ ನಡೆಸುತ್ತಿದ್ದಾರೆ.

ಇದು ಬಹುಶಃ ಹೈಕಮಾಂಡ್ ನಿರ್ದೇಶನದಂತೆ ನಡೆದ ತೀರ್ಮಾನವಾಗಿರಲು ಸಾಧ್ಯವೇ ಇಲ್ಲ. ಅಧಿಕಾರಕ್ಕೇರಲೇ ಬೇಕು ಎಂಬ ಯಡಿಯೂರಪ್ಪನವರ ಹಠದಿಂದ ಈ ತೀರ್ಮಾನಕ್ಕೆ ಬಂದಿರಬಹುದು ಎಂದು ಟ್ವಿಟರಿಗರು ಚರ್ಚೆ ಮಾಡುತ್ತಿದ್ದಾರೆ. ಒಂದು ವೇಳೆ ಹೈಕಮಾಂಡ್ ಸೂಚನೆ ಕೊಟ್ಟಿದ್ದರೆ ಮೊನ್ನೆ ದೆಹಲಿಯಲ್ಲಿ ಅಮಿತ್ ಶಾ ಭೇಟಿಯ ತಕ್ಷಣವೇ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಮುಂದಾಗುತ್ತಿದ್ದರು.

ಆದರೆ ಇದೆಲ್ಲವೂ ರಾಜ್ಯ ನಾಯಕರದ್ದೇ ತಂತ್ರವಾಗಿರಬಹುದು ಎಂಬುದು ಜನರ ಅಭಿಪ್ರಾಯ. ಒಂದು ವೇಳೆ ಈ ಬಾರಿಯೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಸರ್ಕಾರ ಬಿದ್ದು ಹೋದರೆ ಅಥವಾ ಇನ್ನೂ ರಾಜೀನಾಮೆ ಇತ್ಯರ್ಥವಾಗದ ಶಾಸಕರು ಬಿಜೆಪಿ ಪರ ವಿಶ್ವಾಸ ಮತ ಚಲಾಯಿಸಿದರೆ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments