ರೋಗಿಗಳಿಗೆ ವಿತರಿಸಬೇಕಿದ್ದ ಮಾತ್ರೆಗಳಿಗೆ ಬೆಂಕಿ ಹಚ್ಚಿದ್ಯಾಕೆ?

Webdunia
ಶುಕ್ರವಾರ, 21 ಡಿಸೆಂಬರ್ 2018 (12:10 IST)
ಅವಧಿ ಮುಗಿದ ಮಾತ್ರೆಗಳ ಜೊತೆಗೆ ಅವಧಿ ಪೂರ್ಣಗೊಳ್ಳದ ಹಾಗೂ ರೋಗಿಗಳಿಗೆ ವಿತರಣೆ ಮಾಡಬೇಕಿದ್ದ ಮಾತ್ರೆಗಳಿಗೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕಲಬುರ್ಗಿಯ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬಳಿ ಘಟನೆ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗೆ ಆಹುತಿಯಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅವಧಿ ಮೀರಿದ್ದ ಔಷಧ ಎಂದು ಅಧಿಕಾರಿಗಳು ಸಮಜಾಯಿಷಿ ನೀಡುತ್ತಿದ್ದಾರೆ.

ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿಯೇ ವಿಲೇವಾರಿ ಮಾಡಬೇಕೆಂಬ ನಿಯಮವಿದೆ. ಆದರೂ ಬಯಲು ಪ್ರದೇಶದಲ್ಲಿ ಬೆಂಕಿ ಹಚ್ಚಿ ನಿರ್ಲಕ್ಷ್ಯ ತೋರಿರುವ ಸಿಬ್ಬಂದಿಯ ಕ್ರಮಕ್ಕೆ ಜನರು ಗರಂ ಆಗಿದ್ದಾರೆ.

ಹಿರಿಯ ಅಧಿಕಾರಿಗಳು ಬಂದು ಕೆಳಹಂತದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ನಂತರ ಅಲ್ಲಿದ್ದ ಸಿಬ್ಬಂದಿ ಬೆಂಕಿ ನಂದಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ.ರಾಜಕುಮಾರ್ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments