Webdunia - Bharat's app for daily news and videos

Install App

ರೋಗಿಗಳಿಗೆ ವಿತರಿಸಬೇಕಿದ್ದ ಮಾತ್ರೆಗಳಿಗೆ ಬೆಂಕಿ ಹಚ್ಚಿದ್ಯಾಕೆ?

Webdunia
ಶುಕ್ರವಾರ, 21 ಡಿಸೆಂಬರ್ 2018 (12:10 IST)
ಅವಧಿ ಮುಗಿದ ಮಾತ್ರೆಗಳ ಜೊತೆಗೆ ಅವಧಿ ಪೂರ್ಣಗೊಳ್ಳದ ಹಾಗೂ ರೋಗಿಗಳಿಗೆ ವಿತರಣೆ ಮಾಡಬೇಕಿದ್ದ ಮಾತ್ರೆಗಳಿಗೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕಲಬುರ್ಗಿಯ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬಳಿ ಘಟನೆ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗೆ ಆಹುತಿಯಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅವಧಿ ಮೀರಿದ್ದ ಔಷಧ ಎಂದು ಅಧಿಕಾರಿಗಳು ಸಮಜಾಯಿಷಿ ನೀಡುತ್ತಿದ್ದಾರೆ.

ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿಯೇ ವಿಲೇವಾರಿ ಮಾಡಬೇಕೆಂಬ ನಿಯಮವಿದೆ. ಆದರೂ ಬಯಲು ಪ್ರದೇಶದಲ್ಲಿ ಬೆಂಕಿ ಹಚ್ಚಿ ನಿರ್ಲಕ್ಷ್ಯ ತೋರಿರುವ ಸಿಬ್ಬಂದಿಯ ಕ್ರಮಕ್ಕೆ ಜನರು ಗರಂ ಆಗಿದ್ದಾರೆ.

ಹಿರಿಯ ಅಧಿಕಾರಿಗಳು ಬಂದು ಕೆಳಹಂತದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ನಂತರ ಅಲ್ಲಿದ್ದ ಸಿಬ್ಬಂದಿ ಬೆಂಕಿ ನಂದಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ.ರಾಜಕುಮಾರ್ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ನನ್ನ ಫ್ರೆಂಡು ಎಂದು ಅತ್ತ ಕಡೆಯಿಂದ ಡಬಲ್ ಸುಂಕ ಹೇರಲು ಕುತಂತ್ರ ಮಾಡಿದ್ರಾ ಟ್ರಂಪ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ನೇಪಾಳದಲ್ಲಿ ಹಿಂಸಾಚಾರವಾದರೆ ಅದಕ್ಕೆ ಭಾರತವೇ ಕಾರಣವಂತೆ: ಕೆಪಿ ಶರ್ಮಾ ಓಲಿ ಆರೋಪ

ಮುಂದಿನ ಸುದ್ದಿ
Show comments