ನಂದಿನಿ ಹಾಲು ದರ ಏರಿಕೆ ಮಾಡಿ ರೈತರಿಗೆ ಕೊಡ್ತೀವಿ ಎಂದು ಕಿವಿಗೆ ಹೂ ಇಟ್ಟ ಸರ್ಕಾರ

Krishnaveni K
ಮಂಗಳವಾರ, 1 ಏಪ್ರಿಲ್ 2025 (12:17 IST)
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ರೈತರಿಗೆ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಜನರ ಕಿವಿಗೆ ಹೂ ಇಟ್ಟಿತಾ? ಅಂತಹದ್ದೊಂದು ಅನುಮಾನ ಬರಲು ಕಾರಣವಿದೆ.

ಮೊನ್ನೆಯಷ್ಟೇ ರಾಜ್ಯ ಸರ್ಕಾರ ನಂದಿನಿ ಹಾಲಿಗೆ ಪ್ರತೀ ಲೀಟರ್ ಗೆ 4 ರೂ. ನಂತೆ ಏರಿಕೆ ಮಾಡಿತ್ತು. ದರ ಏರಿಕೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರುಗಳು ಈ ಹಣವನ್ನು ರೈತರಿಗೆ ನೀಡುತ್ತೇವೆ ಎಂದು ಸಮಜಾಯಿಷಿ ನೀಡಿದ್ದರು.

ಆದರೆ ಈಗ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ದರದಲ್ಲಿ 3.50 ರೂ. ಇಳಿಕೆ ಮಾಡಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ರೈತರಿಗೆ ಕೊಡ್ತೀವಿ ಎಂದು ಸರ್ಕಾರ ಜನರಿಗೆ ಮಂಕುಬೂದಿ ಎರಚಿದೆಯೇ ಎಂಬ ಅನುಮಾನ ಶುರುವಾಗಿದೆ.

ಹಾವೇರಿ ಹಾಲು ಒಕ್ಕೂಟ ಉತ್ಪಾದಕರಿಗೆ ನೀಡುತ್ತಿದ್ದ ದರದಲ್ಲಿ 3.50 ರೂ. ಇಳಿಕೆ ಮಾಡಿದೆ. ಹಾಲು ಉತ್ಪಾದಕರು, ಸಂಘಗಳಿಗೆ ನೀಡುತ್ತಿದ್ದ ಹಣದಲ್ಲಿ ಇಳಿಕೆ ಮಾಡಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಸಮರ್ಥನೆ ನೀಡಿರುವ ಹಾವೇರಿ ಹಾಲು ಒಕ್ಕೂಟ, ಸದ್ಯಕ್ಕೆ ಒಕ್ಕೂಟ 18 ಕೋಟಿ ರೂ. ನಷ್ಟದಲ್ಲಿದೆ. ಅದಕ್ಕೇ ದರ ಇಳಿಕೆ ಮಾಡಲಾಗಿದೆ ಎಂದಿದೆ. ಹಾಗಿದ್ದರೆ ನಂದಿನಿ ಹಾಲಿನ ದರ ಏರಿಕೆ ಮಾಡಿರುವುದು ಯಾವ ಪುರುಷಾರ್ಥಕ್ಕೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments