Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಡಿಕೆಶಿ ಸೆಳೆಯುವ ಪ್ರಯತ್ನ ಮಾಡಿಲ್ಲ: ಜಾವ್ಡೇಕರ್

ಬಿಜೆಪಿಗೆ ಡಿಕೆಶಿ ಸೆಳೆಯುವ ಪ್ರಯತ್ನ ಮಾಡಿಲ್ಲ: ಜಾವ್ಡೇಕರ್
ಬೆಂಗಳೂರು , ಮಂಗಳವಾರ, 14 ನವೆಂಬರ್ 2017 (14:09 IST)
ಬಿಜೆಪಿಗೆ ಹಿರಿಯ ಕಾಂಗ್ರೆಸ್ ಮುಖಂಡ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಸೆಳೆಯುವ ಪ್ರಯತ್ನ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಬಿಜೆಪಿ ಅಜೆಂಡಾದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹೇಳಿಕೆ ಆಧಾರರಹಿತವಾಗಿದೆ. ಅವರು ಯಾವ ಕಾರಣಕ್ಕೆ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಾಗ ಐಟಿ ಅಧಿಕಾರಿಗಳು ಬಿಜೆಪಿ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆಗಡುಕನಾಗಿದ್ರೆ ಯಾರ ಕೊಲೆ ಮಾಡಿದ್ದೀನಿ ಹೇಳಿ: ಈಶ್ವರಪ್ಪಗೆ ಸಚಿವ ರಮೇಶ್ ಕುಮಾರ್ ಸವಾಲ್