Select Your Language

Notifications

webdunia
webdunia
webdunia
webdunia

ಮೋದಿ ಭೇಟಿಗೆ ಅವಕಾಶ ಸಿಗಲಿಲ್ಲ ಎನ್ನುವುದು ಹಾಸ್ಯಾಸ್ಪದ: ಕರಂದ್ಲಾಜೆ

ಮೋದಿ ಭೇಟಿಗೆ ಅವಕಾಶ ಸಿಗಲಿಲ್ಲ ಎನ್ನುವುದು ಹಾಸ್ಯಾಸ್ಪದ: ಕರಂದ್ಲಾಜೆ
ಮೈಸೂರು , ಸೋಮವಾರ, 26 ಸೆಪ್ಟಂಬರ್ 2016 (21:11 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಸಿಗಲಿಲ್ಲವೆನ್ನುವ ವಿಚಾರ ಹಾಸ್ಯಸ್ಪದ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಏನೇ ಬಂದರೂ ನಾವು ರಾಜ್ಯ ಸರಕಾರದೊಂದಿಗೆ ಇರುತ್ತೇವೆ. ಕಾವೇರಿ ಪ್ರಾಧೀಕಾರ ರಚನೆಯ ಕುರಿತು ಚರ್ಚೆ ನಡೆಸಬೇಕಾಗಿದೆ ಎಂದು ಹೇಳಿದರು.
 
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಧೀಕಾರದ ಮೊರೆ ಹೋಗುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಆವರ ಬಳಿ ತೆರಳಬೇಕಿತ್ತು. ಮುಖ್ಯಮಂತ್ರಿಯವರಿಗೆ ಪ್ರಧಾನಿ ನರೇಂದ್ರ ಮೋದಿ  ಭೇಟಿಗೆ ಅವಕಾಶ ಸಿಗಲಿಲ್ಲವೆನ್ನುವ ವಿಚಾರ ಹಾಸ್ಯಾಸ್ಪದ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಕಲಾವಿದರನ್ನು ಬೂಟಿನಿಂದ ಹೊಡೆಯಬೇಕು: ಬಿಜೆಪಿ