Webdunia - Bharat's app for daily news and videos

Install App

ಚರ್ಚ್‌ನ ಬಿಷಪ್ ಆ ಮಹಿಳೆಗೆ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 2 ಫೆಬ್ರವರಿ 2019 (15:34 IST)
ಲೈಂಗಿಕ ದೌರ್ಜನ್ಯ ನನ್ನ ಮೇಲೆ ಚರ್ಚ್​ನ ಬಿಷಪ್ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಸಂತ್ರಸ್ಥ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಚರ್ಚ್ ಬಿಷಪ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿ ಅವಮಾನ ತಾಳಲಾರದೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಸಂಬಂಧ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೆಂಟ್ರಲ್ ಬಿಷಪ್ ಪಿ.ಕೆ.ಸಾಮ್ಯುಯಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಶಿವಾಜಿ ನಗರ ಪೊಲೀಸರಿಗೆ ದೂರು ನೀಡಿರುವ ಮಹಿಳೆಯು, ದೂರು ಹಿಂಪಡೆಯುವಂತೆ ಸ್ಯಾಮುಯೆಲ್ ಆಪ್ತ ವಿನೋದ್ ದಾಸ್ ಧಮ್ಕಿ ಹಾಕಿದ್ದಾನೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಚರ್ಚ್ ಆಫ್ ಸೌತ್ ಇಂಡಿಯಾ ಆಸ್ಪತ್ರೆಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದು, ಪ್ರಕರಣ ಹಿಂಪಡೆಯಲು ವಿನೋದ್ ದಾಸ್ ರಾಜಿ ಸಂಧಾನಕ್ಕಾಗಿ ಬಿಷಪ್ ಬಳಿ ಕರೆದುಕೊಂಡು ಹೋಗಿದ್ದನಂತೆ. ವೇಳೆ ಬಿಷಪ್ ದೂರು ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ. ಅಲ್ಲದೆ ಒಂದು ಕೋಟಿ ನೀಡುವುದಾಗಿ ಆಫರ್ ನೀಡಿ ಮಹಿಳೆ ಮೇಲೆ ಕೈ ಹಾಕಿ ಅಸಭ್ಯ ವರ್ತನೆ ಮಾಡಿದ್ದಾರೆ. ಇದಕ್ಕೆ ಪ್ರತಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

ತನಗಾದ ಅವಮಾನದಿಂದ ಕ್ರಿಮಿನಾಶಕ ಕುಡಿದು ಮಹಿಳೆ ಆತ್ಮಹತ್ಯೆಗೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಷಪ್ ಸ್ಯಾಮುಯೆಲ್ ಮೇಲೆ ಹಿಂದೆ ಫೋಕ್ಸೋ, ಲೈಂಗಿಕ ದೌರ್ಜನ್ಯ, ಧಮ್ಕಿ, ಭೂ ಕಬಳಿಕೆ ಸೇರಿದಂತೆ ಹಲವು ಕೇಸ್ ಇದೆ. ಸದ್ಯ ಬಿಷಪ್ ಪಿ.ಕೆ.ಸ್ಯಾಮ್ಯುಯೆಲ್ ಮತ್ತು ವಿನೋದ್ ದಾಸ್ ಮೇಲೆ ಪ್ರಕರಣ ದಾಖಲಾಗಿದ್ದು, ಶಿವಾಜಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಮುಂದಿನ ಸುದ್ದಿ