Select Your Language

Notifications

webdunia
webdunia
webdunia
webdunia

ರೈತರ ಪ್ರತಿಭಟನೆಯಿಂದ ಬೇಸರಗೊಂಡ ಸಿಎಂ ಹೇಳಿದ್ದೇನು?

ರೈತರ ಪ್ರತಿಭಟನೆಯಿಂದ ಬೇಸರಗೊಂಡ ಸಿಎಂ ಹೇಳಿದ್ದೇನು?
ಬೆಂಗಳೂರು , ಮಂಗಳವಾರ, 26 ಜನವರಿ 2021 (11:31 IST)
ಬೆಂಗಳೂರು : ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ. ರೈತರ ಪ್ರತಿಭಟನೆಯನ್ನು ಹತ್ತಿಕ್ಕಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೃಷಿ ಕಾಯ್ದೆ ವಿರೋಧಿ ರೈತರು ಟ್ರ್ಯಾಕ್ಟರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿನ್ನಲೆಯಲ್ಲಿ  ಟ್ರ್ಯಾಕ್ಟರ್  ರ್ಯಾಲಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತೆ. ಹೀಗಾಗಿ ಟ್ರ್ಯಾಕ್ಟರ್ ಗಳು ಬೇಡ ಎಂದು ಹೇಳಿದ್ದೇವೆ.  ಆದರೆ ಪ್ರತಿಭಟನಾಕಾರರು ಏಕೆ ಹೀಗೆ ಮಾಡುತ್ತಿದ್ದಾರೆಂದು ಹೇಳುತ್ತಿಲ್ಲ. ಯಾವ ಕಾರಣಕ್ಕೆ ಪ್ರತಿಭಟನೆ ಮಾಡ್ತಿದ್ದಾರೆಂದು ಹೇಳುತ್ತಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೇ  ಕೇವಲ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅಷ್ಟೇ. ನನ್ನ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ. ರೈತ ಮುಖಂಡರು ನಮ್ಮ ಮನೆಗೆ ಬಂದು ಚರ್ಚಿಸಬಹುದು ಎಂದು ಸಿಎಂ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಪಥ್ ನಲ್ಲಿ ರಾಷ್ಟ್ರಪತಿಯಿಂದ ಧ್ವಜಾರೋಹಣ