Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸುಮಲತಾ ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದ ಸಚಿವರ್ಯಾರು ಗೊತ್ತಾ?

webdunia
ಶನಿವಾರ, 23 ಫೆಬ್ರವರಿ 2019 (12:46 IST)
ಬಾಗಲಕೋಟೆ : ನಟಿ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸೀಟು ಹಂಚಿಕೆಯಾಗಬೇಕಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‍ಗೆ ಹೋಗುತ್ತೋ ಅಥವಾ ಕಾಂಗ್ರೆಸ್‍ಗೆ ಬರುತ್ತೋ ಗೊತ್ತಿಲ್ಲ. ಒಂದು ವೇಳೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ಸಿಗೆ ಹಂಚಿಕೆಯಾದರೆ ಸುಮಲತಾ ಅವರೇ ನಮ್ಮ ಅಭ್ಯರ್ಥಿ. ಸುಮಲತಾ ಅಂಬರೀಶ್ ಅವರ ಹೆಸರು ಶಿಫಾರಸ್ಸಿಗೆ ನನ್ನ ಮೊದಲ ಬೆಂಬಲವಿದೆ ಎಂದು ಹೇಳಿದ್ದಾರೆ.


 ಹಾಗೇ ದಿವಂಗತ ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಅವರ ನಿಧನದ ಅನುಕಂಪದ ಸಹಕಾರದಿಂದ ಸುಮಲತಾ ಮಂಡ್ಯದಿಂದ ಗೆಲ್ಲುತ್ತಾರೆ. ಹೀಗಾಗಿ ಅವರಿಗೆ ನನ್ನ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಏನ್ಮಾಡ್ತು ಗೊತ್ತಾ?