Webdunia - Bharat's app for daily news and videos

Install App

ಸಭೆ ನಡೆಯುತ್ತಿರುವಾಗಲೇ ಪಿಡಿಒ ಓಡಿ ಹೋಗಿದ್ಯಾಕೆ?

Webdunia
ಶನಿವಾರ, 23 ಫೆಬ್ರವರಿ 2019 (15:49 IST)
ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆ ನಡೆಯುತ್ತಿರುವಾಗಲೇ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಸಭೆಯಿಂದ ಎದ್ದು ಓಡಿ ಹೋಗಿರುವ ಪ್ರಸಂಗ ನಡೆದಿದೆ.

ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆಯಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಎಲ್.ಚಂದ್ರನಾಯ್ಕ ಪರಾರಿಯಾದ ಘಟನೆ ನಡೆದಿದೆ.

ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 23 ಸದಸ್ಯರ ಪೈಕಿ ವಿಶೇಷವಾಗಿ 18 ಜನ ಮಹಿಳಾ ಸದಸ್ಯರಿದ್ದು, 5 ಜನ ಪುರುಷ ಸದಸ್ಯರಿದ್ದಾರೆ. ಪಂಚಾಯ್ತಿ ಅಧ್ಯಕ್ಷೆ ಎಲ್.ಸಾವಿತ್ರಿ ಶಶಿಕುಮಾರ್ ನಾಯ್ಕರವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಕರೆಯಲಾಗಿತ್ತು. ಸಭೆಗೆ ಸರ್ವ ಸದಸ್ಯರು ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿದ್ದು, ಸಭೆ ಪ್ರಾರಂಭ ಮಾಡವ ಮೊದಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಲ್.ಚಂದ್ರನಾಯ್ಕ ಪಂಚಾಯ್ತಿಗೆ ಬಂದು ಸದಸ್ಯರ ಹಾಜರಿ ಪುಸ್ತಕ ಮತ್ತು ನಡಾವಳಿಕೆ ಪುಸ್ತಕ ಹಾಗೂ ಸಂಬಂದಪಟ್ಟ ದಾಖಲಾತಿಗಳನ್ನು ತೆಗೆದುಕೊಂಡರು.

ಆ ಬಳಿಕ ಸಭೆಯ ಬಗ್ಗೆ ಅಧ್ಯಕ್ಷರಿಗಾಗಲಿ, ಉಪಾಧ್ಯಾಕ್ಷರಿಗಾಗಲಿ ಪಂಚಾಯ್ತಿಯ ಯಾವೊಬ್ಬ ಸದಸ್ಯರ ಗಮನಕ್ಕೆ ಯಾವುದೇ ಮಾಹಿತಿ ನೀಡದೆ ವಿಶೇಷ ಸಭೆಯನ್ನು ತಿರಸ್ಕಾರ ಮಾಡಿ ಸಭೆಯಿಂದ ಓಡಿ ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments