ಸಭೆ ನಡೆಯುತ್ತಿರುವಾಗಲೇ ಪಿಡಿಒ ಓಡಿ ಹೋಗಿದ್ಯಾಕೆ?

Webdunia
ಶನಿವಾರ, 23 ಫೆಬ್ರವರಿ 2019 (15:49 IST)
ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆ ನಡೆಯುತ್ತಿರುವಾಗಲೇ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಸಭೆಯಿಂದ ಎದ್ದು ಓಡಿ ಹೋಗಿರುವ ಪ್ರಸಂಗ ನಡೆದಿದೆ.

ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆಯಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಎಲ್.ಚಂದ್ರನಾಯ್ಕ ಪರಾರಿಯಾದ ಘಟನೆ ನಡೆದಿದೆ.

ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 23 ಸದಸ್ಯರ ಪೈಕಿ ವಿಶೇಷವಾಗಿ 18 ಜನ ಮಹಿಳಾ ಸದಸ್ಯರಿದ್ದು, 5 ಜನ ಪುರುಷ ಸದಸ್ಯರಿದ್ದಾರೆ. ಪಂಚಾಯ್ತಿ ಅಧ್ಯಕ್ಷೆ ಎಲ್.ಸಾವಿತ್ರಿ ಶಶಿಕುಮಾರ್ ನಾಯ್ಕರವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಕರೆಯಲಾಗಿತ್ತು. ಸಭೆಗೆ ಸರ್ವ ಸದಸ್ಯರು ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿದ್ದು, ಸಭೆ ಪ್ರಾರಂಭ ಮಾಡವ ಮೊದಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಲ್.ಚಂದ್ರನಾಯ್ಕ ಪಂಚಾಯ್ತಿಗೆ ಬಂದು ಸದಸ್ಯರ ಹಾಜರಿ ಪುಸ್ತಕ ಮತ್ತು ನಡಾವಳಿಕೆ ಪುಸ್ತಕ ಹಾಗೂ ಸಂಬಂದಪಟ್ಟ ದಾಖಲಾತಿಗಳನ್ನು ತೆಗೆದುಕೊಂಡರು.

ಆ ಬಳಿಕ ಸಭೆಯ ಬಗ್ಗೆ ಅಧ್ಯಕ್ಷರಿಗಾಗಲಿ, ಉಪಾಧ್ಯಾಕ್ಷರಿಗಾಗಲಿ ಪಂಚಾಯ್ತಿಯ ಯಾವೊಬ್ಬ ಸದಸ್ಯರ ಗಮನಕ್ಕೆ ಯಾವುದೇ ಮಾಹಿತಿ ನೀಡದೆ ವಿಶೇಷ ಸಭೆಯನ್ನು ತಿರಸ್ಕಾರ ಮಾಡಿ ಸಭೆಯಿಂದ ಓಡಿ ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments