Select Your Language

Notifications

webdunia
webdunia
webdunia
webdunia

'ಕಡ್ಲೆಪುರಿ ತಿನ್ನುತ್ತಿದ್ದರಾ?'

'ಕಡ್ಲೆಪುರಿ ತಿನ್ನುತ್ತಿದ್ದರಾ?'
bangalore , ಸೋಮವಾರ, 18 ಏಪ್ರಿಲ್ 2022 (18:48 IST)
ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷವಾಗಿದೆ. ಈ ಹಿಂದೆ ವಿರೋಧ ಪಕ್ಷದಲ್ಲಿ ಬಿಜೆಪಿಯವರು ಇರಲಿಲ್ವಾ? ಆಗ ಏಕೆ ಇವರು ಭ್ರಷ್ಟಾಚಾರದ ಬಗ್ಗೆ ಕೇಳಿಲ್ಲವೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ರೆ ಜನ ನಂಬ್ತಾರಾ? ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧ. ಇದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಗೊತ್ತಿಲ್ಲವಾ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ಕಾರ್ಯಕಾರಿಣಿಯಿಂದ ಬಿಜೆಪಿಗೆ ಶಕ್ತಿ'