ಕಳಸಾ ಬಂಡೂರಿ ಹೋರಾಟದಲ್ಲಿ ಭಾಗಿಯಾದ ರೈತರ ಬಿಡುಗಡೆಗೆ ಸಬ್ ಕಮಿಟ್ ರಚಿಸಲಾಗಿದ್ದು, ಅವರನ್ನು ಗಡಿಪಾರ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದಕ್ಕೆ ಗದಗ ನಗರಕ್ಕೆ ಆಗಮಿಸಿದ ಅವರು, ಕಳಸಾ ಬಂಡೂರಿ ಹೋರಾಟದಲ್ಲಿ ಭಾಗಿಯಾದ ರೈತರ ಗಡಿಪಾರ ಮಾಡಲಾಗುವುದಿಲ್ಲ. ರೈತರೇನು ಗೂಂಡಾಗಳಾ ಪ್ರಶ್ನಿಸಿದರು.
ಕಪ್ಪತ್ತಗುಡ್ಡದ ಸಂರಕ್ಷಣೆಗೆ ನನಗೂ ಸಹ ಮನವಿಗಳು ಬಂದಿದ್ದೂ, ಈ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಹಿರಂಗ ಸಭೆ ಮೂಲಕ ಜನಾಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ