Webdunia - Bharat's app for daily news and videos

Install App

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಕೃಷ್ಣವೇಣಿ ಕೆ
ಭಾನುವಾರ, 30 ಆಗಸ್ಟ್ 2026 (17:42 IST)
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಶಾಸಕ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಒಳಗೂ-ಹೊರಗೂ ತೀವ್ರ ಪ್ರತಿಭಟನೆ ನಡೆಸಿ, ಬಳ್ಳಾರಿಗೆ ಬೃಹತ್ ಪಾದಯಾತ್ರೆ ನಡೆಸಲು ಸಜ್ಜಾಗಿದ್ದವು. ಆದರೆ, ಪಾದಯಾತ್ರೆ ಆರಂಭವಾಗುವ ಮುನ್ನವೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಬಿಜೆಪಿಯಲ್ಲಿ 'ಪಾದಯಾತ್ರೆ ಬೇಕೋ? ಬೇಡವೋ?' ಎಂಬ ಗೊಂದಲ ಮೂಡಿಸಿದೆ.
 
ನಾಗೇಂದ್ರ ಅವರ ರಾಜೀನಾಮೆಯನ್ನು ತಕ್ಷಣವೇ ಪಡೆದುಕೊಳ್ಳಬೇಕೆಂದು ಪಟ್ಟು ಹಿಡಿದಿದ್ದ ಬಿಜೆಪಿ, ಸೆಪ್ಟೆಂಬರ್ 1 ರಿಂದ ಬಳ್ಳಾರಿಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಘೋಷಿಸಿತ್ತು. ಆದರೆ, ಪ್ರತಿಪಕ್ಷಗಳ ತೀವ್ರ ಒತ್ತಡಕ್ಕೆ ಮಣಿದು ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದರಿಂದ ಪಾದಯಾತ್ರೆಯ ಮುಖ್ಯ ಉದ್ದೇಶವೇ ಈಡೇರಿದಂತಾಗಿದೆ.
 
ಪಕ್ಷದಲ್ಲೇ ಭಿನ್ನ ಅಭಿಪ್ರಾಯ:
ನಾಗೇಂದ್ರ ಅವರ ರಾಜೀನಾಮೆ ಪ್ರಸಂಗದ ಬಳಿಕ ಬಿಜೆಪಿ ನಾಯಕರ ನಡುವೆ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಮುಖ್ಯ ಆರೋಪಿಯಾಗಿದ್ದ ಸಚಿವರೇ ರಾಜೀನಾಮೆ ನೀಡಿದ ಮೇಲೆ ಇನ್ನು ಪಾದಯಾತ್ರೆ ನಡೆಸುವ ಅಗತ್ಯವಿಲ್ಲ, ಹೋರಾಟ ಇಲ್ಲಿಗೇ ಸಾಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದೆ.
 
ಮತ್ತೊಂದು ಬಣದ ವಾದ: ಬರಿ ಸಚಿವರ ರಾಜೀನಾಮೆಯಿಂದ ಹಗರಣ ಮುಗಿಯುವುದಿಲ್ಲ. ನಿಗಮದಿಂದ ದುರುಪಯೋಗವಾಗಿರುವ ಹಣವನ್ನು ಸಂಪೂರ್ಣವಾಗಿ ವಾಪಸ್ ತರಬೇಕು ಮತ್ತು ಹಗರಣದ ಹಿಂದಿರುವ ಇತರ ಪ್ರಭಾವಿ ನಾಯಕರನ್ನು ಬಯಲಿಗೆಳೆಯಲು ಪಾದಯಾತ್ರೆ ನಡೆಸಲೇಬೇಕು ಎಂದು ಪ್ರತಿಪಾದಿಸುತ್ತಿದೆ.
 
ಪಾದಯಾತ್ರೆ ವಿಚಾರವಾಗಿ ಪಕ್ಷದೊಳಗೆ ಉಂಟಾಗಿರುವ ಈ ಗೊಂದಲವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. "ನಾಗೇಂದ್ರ ಅವರ ರಾಜೀನಾಮೆಯಿಂದಾಗಿ ಪಾದಯಾತ್ರೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನಾಯಕರ ನಡುವೆ ಭಿನ್ನ ಅಭಿಪ್ರಾಯಗಳು ಇರುವುದು ಹೌದು. ಈ ಬಗ್ಗೆ ಹಿರಿಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ಮುಂದಿನ ಸುದ್ದಿ
Show comments