Webdunia - Bharat's app for daily news and videos

Install App

ನಿರಾಶ್ರಿತರಿಗೆ ಪರಿಹರದಲ್ಲೂ ತಾರತಮ್ಯ - ಬಿ. ಕೆ. ಹರಿಪ್ರಸಾದ್ ಗರಂ

Webdunia
ಬುಧವಾರ, 20 ಜುಲೈ 2022 (18:03 IST)
ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದಿಂದ ತಾರತಮ್ಯ ಅಮಾನವೀಯ ನಡೆಯಾಗಿದೆ, ಸರ್ಕಾರ ಈಗ ನಿರಾಶ್ರಿತರ ನೆರವಿಗೆ ಧಾವಿಸಬೇಕೆಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
 
ರಾಜ್ಯದ ಬಹುತೇಕ ಜಿಲ್ಲೆಗಳು ಅತಿವೃಷ್ಠಿಯಿಂದ ತತ್ತರಿಸುತ್ತಿವೆ.ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರಿನ ಪ್ರವಾಹ ಅವಾಂತರವನ್ನೇ ಸೃಷ್ಟಿಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸುರತ್ಕಲ್, ಮಂಗಳೂರು ನಗರ ಉತ್ತರದ ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ.
 
ಮುಖ್ಯಮಂತ್ರಿಗಳು,ಸಚಿವರುಗಳು "ಬಂದ ಪುಟ್ಟ ಹೋದ ಪುಟ್ಟ" ಎಂಬಂತೆ ನೆರೆ ಪೀಡಿತ ಪ್ರದೇಶಗಳಿಗೆ ಫ್ಯಾಶನ್ ಶೋ ಗೆ ಭೇಟಿ ಕೊಟ್ಟಿದ್ದು ಮಾತ್ರ. ಆದರೆ ಇಲ್ಲಿವರೆಗೂ ನಯಾ ಪೈಸೆ ಬಿಡುಗಡೆ ಮಾಡಲಿಲ್ಲ. ನೊಂದವರಿಗೆ ನೆರವು ನೀಡಲಿಲ್ಲ. ನಿರಾಶ್ರಿತರಿಗೆ ನೀಡಿರುವ ಭರವಸೆಗಳು ನಿರಾಸೆಗೊಳಿಸಿವೆ.
 
ಪಚ್ಚನಾಡಿ, ಗುರುಪುರ, ಮಿನಕಳಿ, ಉಳ್ಳಾಲ, ಸುರತ್ಕಲ್, ಸೋಮೇಶ್ವರ ಗ್ರಾಮ , ಬೆಟ್ಟಂಪಾಡಿ, ಬೈಕಂಪಾಡಿ, ಅದ್ಯಪಾಡಿ ಸೇರಿದಂತೆ ಇನ್ನಿತರೆ ಮಳೆಯಿಂದ ಹಾನಿಗೊಳಿಗಾಗಿರುವ ಹಾಗೂ ಕಡಲ್ಕೊರೆತದಿಂದ ಅಪಾಯದಲ್ಲಿರುವ ಪ್ರದೇಶಗಳಿಗೆ ಭೇಟಿ ಮಾಡಿದೆ. ಬಹುತೇಕ ಕಡೆ ಇಲ್ಲಿವರೆಗೂ ನಿರಾಶ್ರಿತರಿಗೆ ಪ್ರಾಥಮಿಕ ಸೌಲಭ್ಯವೂ ಕಲ್ಪಿಸದೆ ಅಮಾನವೀಯವಾಗಿ ನಡೆದುಕೊಂಡಿರುವುದು ದುರಂತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments