Webdunia - Bharat's app for daily news and videos

Install App

ಬಿಜೆಪಿ ಸೇರಿದರೂ ಕಾಂಗ್ರೆಸ್ ನಂಟು ಸುಲಭದಲ್ಲಿ ಬಿಡಲ್ಲ: ಎಸ್ ಎಂ ಕೃಷ್ಣ

Webdunia
ಶನಿವಾರ, 25 ಮಾರ್ಚ್ 2017 (15:20 IST)
ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಮೇಲೆ ಮುನಿಸಿಕೊಂಡು ಬಿಜೆಪಿ ಸೇರಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಗೆ ಇಂದೂ ಹಳೆಯ ಪಕ್ಷದ ಮೇಲಿನ ನಂಟು ಬಿಡಲು ಕಷ್ಟವಂತೆ.

 

ಕಾಂಗ್ರೆಸ್ ನಲ್ಲಿ ಸುಮಾರು 46 ವರ್ಷವಿದ್ದೆ. ಅಷ್ಟು ಬೇಗ ಆ ಪಕ್ಷದ ನಂಟು ಬಿಡಲು ಸಾಧ್ಯವಾಗಲ್ಲ. ಅಷ್ಟು ಬೇಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷವನ್ನು ನನ್ನ ಪಕ್ಷವೆಂದು ಒಪ್ಪಿಕೊಳ್ಳಲು ಕಷ್ಟ ಎಂದು ಕೃಷ್ಣ ಹೇಳಿದ್ದಾರೆ.

 
ಹಾಗಿದ್ದರೂ, ಬಿಜೆಪಿಯಲ್ಲಿ ತಮಗೆ ದೊರೆತ ಅಭೂತಪೂರ್ವ ಸ್ವಾಗತದಿಂದ ಖುಷಿಯಾಗಿದ್ದಾರೆ. ಇದು ಇನ್ನು ಮುಂದೆ, ನಮ್ಮ ಪಕ್ಷ ಎಂದಿದ್ದಾರೆ.  ಅಲ್ಲದೆ, ಬಿಜೆಪಿಯಲ್ಲಿರುವ ಶಿಸ್ತು ತುಂಬಾ ಇಷ್ಟವಾಯಿತು ಎಂದಿದ್ದಾರೆ.

 
ಇದೇ ವೇಳೆ ತನಗಿಂತ ಕಿರಿಯ ಅಮಿತ್ ಶಾ ಮುಂದೆ ಕೈ ಕಟ್ಟಿಕೊಂಡು ನಿಲ್ಲುವ ಪರಿಸ್ಥಿತಿ ಕೃಷ್ಣರದ್ದು ಎಂದು ಟೀಕಿಸಿದ್ದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ನೀಡಿದ ಅವರು, ಮೊದಲು ಅವರು ತಮ್ಮ ಬೆನ್ನು ನೋಡಿಕೊಳ್ಳಿ. ತಮ್ಮ ನಾಯಕನ ವಯಸ್ಸು ಎಷ್ಟೆಂದು ನೋಡಿಕೊಳ್ಳಲಿ ಎಂದಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments