Webdunia - Bharat's app for daily news and videos

Install App

ಡಿಐಜಿ ರೂಪಾಗೆ ಈಗ ನೂರಾನೆಯ ಬಲ ಬಂದಿದೆಯಂತೆ! ಕಾರಣವೇನು ಗೊತ್ತಾ?

Webdunia
ಶನಿವಾರ, 15 ಜುಲೈ 2017 (11:35 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಜಿಪಿ ಸತ್ಯನಾರಾಯಣ ವಿರುದ್ಧವೇ ತಿರುಗಿ ಬಿದ್ದ ಡಿಐಜಿ ರೂಪಾ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಷ್ಟೆಲ್ಲಾ ಸತ್ಯ ಹೊರಹಾಕಲು ಡಿಐಜಿ ರೂಪಾಗೆ ಈಗ ಮತ್ತಷ್ಟು ಬಲ ಬಂದಿದೆ.


ಅದಕ್ಕೆ ಕಾರಣ ದೇಶ ಕಂಡ ಇನ್ನೊಬ್ಬ ಅಪ್ರತಿಮ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಟ್ವಿಟರ್ ನಲ್ಲಿ ರೂಪಾ ಕ್ರಮಕ್ಕೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ. ಟ್ವಿಟರ್ ಮೂಲಕ ಸಂದೇಶ ಬರೆದಿರುವ ಪುದುಚೇರಿ ಲೆಫ್ಟಿನೆಂಟ್ ಗ ಗವರ್ನರ್ ‘ಇಂತಹ ಇನ್ನಷ್ಟು ಐಪಿಎಸ್ ಅಧಿಕಾರಿಗಳು ನಮಗೆ ಬೇಕು’ ಎಂದು ಹೊಗಳಿದ್ದಾರೆ.

ಅಷ್ಟೇ ಅಲ್ಲ ಈ ಸಂದೇಶಕ್ಕೆ ಪ್ರಧಾನಿ ಮೋದಿ ಮತ್ತು ಅವರ ಕಚೇರಿಯ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ. ಈ ಸಂದೇಶಕ್ಕೆ ಪ್ರತಿಯಾಗಿ ಡಿಐಜಿ ರೂಪಾ ಕೂಡಾ ಧನ್ಯವಾದ ತಿಳಿಸಿದ್ದು, ನಿಮ್ಮಂತಹವರ ಮೆಚ್ಚುಗೆ ನನಗೆ ನೂರಾನೆಯ ಬಲ ಬಂದಿದೆ ಎಂದಿದ್ದಾರೆ. ಇದೀಗ ಸಿಎಂ ತಮಗೆ ನೋಟಿಸ್ ನೀಡಿರುವುದರಿಂದ ಬೇಸರಗೊಂಡಿರುವ ರೂಪಾ ಈ ಘಟನೆಯಿಂದಾಗಿ ನನಗೆ ಮತ್ತಷ್ಟು ಶತ್ರುಗಳು ಹಟ್ಟಿಕೊಂಡಿದ್ದಾರೆ. ಆದರೆ ಅಲ್ಲಿ ಏನೂ ನಡೀತಿಲ್ಲ ಎಂದ ಮೇಲೆ ನನ್ನನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ.. ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments