Webdunia - Bharat's app for daily news and videos

Install App

ಡಿಐಜಿ ರೂಪಾಗೆ ಈಗ ನೂರಾನೆಯ ಬಲ ಬಂದಿದೆಯಂತೆ! ಕಾರಣವೇನು ಗೊತ್ತಾ?

Webdunia
ಶನಿವಾರ, 15 ಜುಲೈ 2017 (11:35 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಜಿಪಿ ಸತ್ಯನಾರಾಯಣ ವಿರುದ್ಧವೇ ತಿರುಗಿ ಬಿದ್ದ ಡಿಐಜಿ ರೂಪಾ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಷ್ಟೆಲ್ಲಾ ಸತ್ಯ ಹೊರಹಾಕಲು ಡಿಐಜಿ ರೂಪಾಗೆ ಈಗ ಮತ್ತಷ್ಟು ಬಲ ಬಂದಿದೆ.


ಅದಕ್ಕೆ ಕಾರಣ ದೇಶ ಕಂಡ ಇನ್ನೊಬ್ಬ ಅಪ್ರತಿಮ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಟ್ವಿಟರ್ ನಲ್ಲಿ ರೂಪಾ ಕ್ರಮಕ್ಕೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ. ಟ್ವಿಟರ್ ಮೂಲಕ ಸಂದೇಶ ಬರೆದಿರುವ ಪುದುಚೇರಿ ಲೆಫ್ಟಿನೆಂಟ್ ಗ ಗವರ್ನರ್ ‘ಇಂತಹ ಇನ್ನಷ್ಟು ಐಪಿಎಸ್ ಅಧಿಕಾರಿಗಳು ನಮಗೆ ಬೇಕು’ ಎಂದು ಹೊಗಳಿದ್ದಾರೆ.

ಅಷ್ಟೇ ಅಲ್ಲ ಈ ಸಂದೇಶಕ್ಕೆ ಪ್ರಧಾನಿ ಮೋದಿ ಮತ್ತು ಅವರ ಕಚೇರಿಯ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ. ಈ ಸಂದೇಶಕ್ಕೆ ಪ್ರತಿಯಾಗಿ ಡಿಐಜಿ ರೂಪಾ ಕೂಡಾ ಧನ್ಯವಾದ ತಿಳಿಸಿದ್ದು, ನಿಮ್ಮಂತಹವರ ಮೆಚ್ಚುಗೆ ನನಗೆ ನೂರಾನೆಯ ಬಲ ಬಂದಿದೆ ಎಂದಿದ್ದಾರೆ. ಇದೀಗ ಸಿಎಂ ತಮಗೆ ನೋಟಿಸ್ ನೀಡಿರುವುದರಿಂದ ಬೇಸರಗೊಂಡಿರುವ ರೂಪಾ ಈ ಘಟನೆಯಿಂದಾಗಿ ನನಗೆ ಮತ್ತಷ್ಟು ಶತ್ರುಗಳು ಹಟ್ಟಿಕೊಂಡಿದ್ದಾರೆ. ಆದರೆ ಅಲ್ಲಿ ಏನೂ ನಡೀತಿಲ್ಲ ಎಂದ ಮೇಲೆ ನನ್ನನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ.. ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments