Select Your Language

Notifications

webdunia
webdunia
webdunia
webdunia

ಶೇ.30-70ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕ

ಶೇ.30-70ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕ
ಬೆಂಗಳೂರು , ಮಂಗಳವಾರ, 26 ಆಗಸ್ಟ್ 2014 (15:53 IST)
ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಶೇ.30 ರಷ್ಟು ಪಾಲು ಮತ್ತು ಕಾರ್ಯಕರ್ತರಿಗೆ ಶೇ.70 ರಷ್ಟು ಪಾಲು ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ರಾಜ್ಯ ಸರಕಾರದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡಲಾಗುವುದೇ ಹೊರತು ಸಚಿವ ಸಂಪುಟ ಪುನರ್‌ರಚನೆ ಮಾಡುವ ಉದ್ದೇಶವಿಲ್ಲ ಎಂದು ಸ್ಪಷ್ಟಡಿಸಿದರು.
 
ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ಅರ್ಹರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದಕ್ಕೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ದಿಗ್ವಿಜಯ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada