ಡಿಕೆಶಿ ಹೈವೋಲ್ಟೇಜ್ ಮೀಟಿಂಗ್?

Webdunia
ಶನಿವಾರ, 23 ಏಪ್ರಿಲ್ 2022 (14:37 IST)
ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದ್ದು, ಕಾಂಗ್ರೆಸ್ ಭಾರೀ ತಯಾರಿ ಆರಂಭಿಸಿದೆ.

ಇದರ ಭಾಗವಾಗಿ ನವದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಈ ನಡುವೆ ಮುಂಬರುವ ಹಲವು ರಾಜ್ಯ ವಿಧಾನಸಭೆ ಚುನಾವಣೆ ಉತ್ತಮ ಸ್ಪರ್ಧೆ ನೀಡುವ ಇರಾದೆ ಹೊಂದಿದೆ. ಇದಕ್ಕಾಗಿ ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ ಜೊತೆಗೂ ಮಾತುಕತೆ ನಡೆಸುತ್ತಿದ್ದು, ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ಸಾಧ್ಯತೆಗಳಿದೆ.

ಹೀಗೆ ಕಾಂಗ್ರೆಸ್ ಸೇರಲಿರುವ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಚೇತರಿಕೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಇದರಲ್ಲಿ ಲೋಕಸಭೆಗೂ ಮುನ್ನ ವಿಧಾನಸಭೆ ಚುನಾವಣೆಗಳನ್ನು ಗೆಲ್ಲುವ ಟಾರ್ಗೆಟ್ ಅನ್ನು ಹೊಂದಿದೆ.

ಕರ್ನಾಟಕದ ಚುನಾವಣೆಯೂ ಲೋಕಸಭೆಗೂ ಮುನ್ನ ಬರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಹೈಕಮಾಂಡ್ ಸಭೆ ನಡೆಸಲಿದೆ ಎನ್ನಲಾಗಿದೆ.

ಇಂದು ನಡೆಯಲಿರುವ ಹೈವೋಲ್ಟೇಜ್ ಸಭೆಯಲ್ಲಿ ಸೋನಿಯಾಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಇರಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಭೆಯಲ್ಲಿ ಸದಸ್ಯತ್ವ ನೋಂದಣಿ, ಸಂಘಟನೆ ಮತ್ತು ಚುನಾವಣಾ ತಯಾರಿ ಮತ್ತು ಪ್ರಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments