Webdunia - Bharat's app for daily news and videos

Install App

ಸರ್ಕಾರ-ಜಿಲ್ಲಾಡಳಿತದ ವಿರುದ್ಧ ಡಿಕೆಶಿ ಆಕ್ರೋಶ

Webdunia
ಬುಧವಾರ, 1 ಸೆಪ್ಟಂಬರ್ 2021 (14:12 IST)
ಚಾಮರಾಜನಗರ: ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲದವರಿಗೆ ರೇಷನ್ ಮತ್ತು ಪೆನ್ಷನ್ ಸಿಗಲ್ಲ ಎಂದು ಆದೇಶ ಹೊರಡಿಸಿದ್ದ ಚಾಮರಾಜನಗರ ಡಿಸಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ. ಆದ್ರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗ್ಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಅಸಮಾಧಾನ ಹೊರಹಾಕಿದ್ದಾರೆ.
'ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ವ್ಯಾಕ್ಸಿನೇಷನ್-ನೋ ಪೆನ್ಷನ್'. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಫಲಾನುಭವಿಗಳಿಗೆ ಪಡಿತರ ವಿತರಿಸುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿಜ. ದ್ದಾರೆ. ಅಷ್ಟೇ ಅಲ್ಲ ಮಾಸಾಶನ ಪಡೆಯಬೇಕಿದ್ದರೂ ವ್ಯಾಕ್ಸಿನೇಷನ್ ಪ್ರಮಾಣಪತ್ರ ಬೇಕೇಬೇಕು. ಈ ಪತ್ರ ತಂದರಷ್ಟೇ ಹಣ ಪಾವತಿಸುವಂತೆ ಎಲ್ಲ ಬ್ಯಾಂಕ್ಗಳಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇದನ್ನು ಡಿಕೆಶಿ ತೀವ್ರವಾಗಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments