Publish Date: Fri, 10 Jun 2022 (07:45 IST)
Updated Date: Fri, 10 Jun 2022 (10:47 IST)
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈ ನಡುವೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಶಾಸಕರಿಗೆ ಅಡ್ಡ ಮತದಾನ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯಸಭೆ ಚುನಾವಣೆ ಹಿನ್ನೆಲೆ ಸಿಎಲ್ಪಿ ಸಭೆ ನಡೆಸಿದ ಅವರು, ತಮ್ಮ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಡ್ಡ ಮತದಾನ ಆಗಬಾರದು. ಒಂದೇ ಒಂದು ಮತ ಅಡ್ಡಮತದಾನವಾದರೂ ಹುಷಾರ್..
ನಾನು ಬದುಕಿರುವವರೆಗೂ ನಿಮಗೆ `ಬಿ ಫಾರಂ ಸಿಗದಂತೆ ನೋಡಿಕೊಳ್ಳುತ್ತೇನೆ. ಯಾರು ಅಡ್ಡ ಮತದಾನ ಮಾಡುತ್ತಾರೋ ಅವರ ರಾಜಕೀಯ ಭವಿಷ್ಯ ಮುಂದೆ ಕಷ್ಟವಾಗಲಿದೆ ಎಂದಿದ್ದಾರೆ.
ಪಕ್ಷದ ಅಧಿಕೃತ ಏಜೆಂಟ್ ಆಗಿ ಡಿಕೆಶಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ, ಕಾಂಗ್ರೆಸ್ನ ಪ್ರತಿ ಶಾಸಕರು ಸಹ ಡಿ.ಕೆ.ಶಿವಕುಮಾರ್ಗೆ ಮತ ಪತ್ರ ತೋರಿಸಿಯೇ ಮತದಾನ ಮಾಡಬೇಕಾಗಿದೆ.