Webdunia - Bharat's app for daily news and videos

Install App

ಬಿಸಿಲೂರಿಗೆ ಆಲಮಟ್ಟಿ ಜಲಾಶಯದಿಂದ ನೀರು ಹರಿಸಿ ಎಂದ ಡಿಸಿ

Webdunia
ಶನಿವಾರ, 22 ಜೂನ್ 2019 (14:18 IST)
ಬಿಸಿಲೂರು ಖ್ಯಾತಿಯ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದ 0.50 ಟಿ.ಎಂ.ಸಿ. ನೀರು ಹರಿಸುವಂತೆ ಜಿಲ್ಲಾಧಿಕಾರಿಗಳಿಂದ ಮನವಿ ಸಲ್ಲಿಕೆ ಮಾಡಲಾಗಿದೆ.

ಕಲಬುರಗಿ ಮಹಾನಗರದ ಜನ ಮತ್ತು ಜಾನುವಾರಗಳಿಗೆ ಜುಲೈ-2019ರ ಮಾಹೆಗೆ ಕುಡಿಯುವ ನೀರಿನ ಅಭಾವ ನೀಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಹರಿಸಬೇಕು. ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯ ಮಾರ್ಗವಾಗಿ ಜೇವರ್ಗಿ ಶಾಖಾ ಕಾಲುವೆ ಮುಖಾಂತರ ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿ ಬ್ಯಾರೇಜ್‍ಗೆ 0.50 ಟಿ.ಎಂ.ಸಿ. ನೀರು ಹರಿಸಬೇಕು. ಹೀಗಂತ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅವರು ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅವರಿಗೆ ಪತ್ರ ಬರೆದಿದ್ದಾರೆ.

ಕಲಬುರಗಿ ನಗರಕ್ಕೆ ನೀರು ಪೂರೈಸಲು ಕಳೆದ ಮೇ-29 ರಿಂದ ಜೂನ್-2ರ ವರೆಗೆ ನಾರಾಯಣಪುರ ಜಲಾಶಯದಿಂದ ಸರಡಗಿ ಬ್ಯಾರೇಜ್‍ಗೆ ಹರಿಸಲಾದ ನೀರು ಪ್ರಸ್ತುತ ಸಂಗ್ರಹಣೆಯಲ್ಲಿದ್ದು, ಅದು ಜೂನ್-2019ರ ಮಾಹೆಯವರೆಗೆ ಸಾಕಾಗುತ್ತದೆ.

ಜುಲೈ ಮಾಹೆಯಲ್ಲಿ ನೀರಿನ ಸಮಸ್ಯೆ ತಲೆದೋರಬಹುದು ಎಂಬ ಮುಂದಾಲೋಚನೆಯಿಂದ ಜೂನ್ 28 ರಿಂದಲೇ ಆಲಮಟ್ಟಿ ಜಲಾಶಯದಿಂದ 0.50 ಟಿ.ಎಂ.ಸಿ ನೀರು ಹರಿಸಲು ಕೃಷ್ಣ ಭಾಗ್ಯ ಜಲ ನಿಗಮ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments