Select Your Language

Notifications

webdunia
webdunia
webdunia
webdunia

ದಿನೇಶ್ ಅಮೀನ್ ಮಟ್ಟುರನ್ನು ಕೂಡಲೇ ಬಂಧಿಸಬೇಕು: ಪ್ರಹ್ಲಾದ್ ಜೋಷಿ

ದಿನೇಶ್ ಅಮೀನ್ ಮಟ್ಟುರನ್ನು ಕೂಡಲೇ ಬಂಧಿಸಬೇಕು: ಪ್ರಹ್ಲಾದ್ ಜೋಷಿ
ಬೆಂಗಳೂರು , ಶನಿವಾರ, 6 ಫೆಬ್ರವರಿ 2016 (13:48 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಭಯೋತ್ಪಾದನೆಯನ್ನು ಬೆಂಬಲಿಸುವಂತಹ ವ್ಯಕ್ತಿಯನ್ನು ಮಾಧ್ಯಮ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಗುಡುಗಿದ್ದಾರೆ.
 
ಯಾವ ಪುಣ್ಯಾತ್ಮ ದಿನೇಶ್ ಅಮೀನ್ ಮಟ್ಟು ಅವರನ್ನು ಮಾಧ್ಯಮ ಸಲಹೆಗಾರರನ್ನಾಗಿ ಮಾಡಿದ್ದಾರೋ ಗೊತ್ತಿಲ್ಲ. ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
 
ದಿನೇಶ್ ಅಮೀನ್ ಮಟ್ಟು ಪರೋಕ್ಷವಾಗಿ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಾ ಅವರ ಪರವಹಿಸಿ ಮಾತನಾಡುತ್ತಿದ್ದಾರೆ. ಅಂತಹ ವ್ಯಕ್ತಿಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಮಾಧ್ಯಮ ಸಲಹೆಗಾರನ್ನಾಗಿ ನೇಮಕ ಮಾಡಿಕೊಂಡಿರುವುದು ನಾಚಿಕೆಗೇಡಿತನದ ಸಂಗತಿ ಎಂದು ವಾಗ್ದಾಳಿ ನಡೆಸಿದರು.
 
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅವರ ಮೇಲೆ ಕೇಸ್ ಹಾಕಿ ಕೂಡಲೇ ಪೊಲೀಸರು ಬಂಧಿಸಬೇಕು ಎಂದು ಗುಡುಗಿದರು.
 
ಕಾಂಗ್ರೆಸ್ ಪಕ್ಷ ಈ ಹಿಂದೆ ಬಿಡುಗಡೆಗೊಳಿಸಿದ ಪ್ರಣಾಳಿಕೆಯಲ್ಲಿ ಯಾವ ಭರಸೆಗಳನ್ನು ಈಡೇರಿಸಲ್ಲ. ಆದ್ದರಿಂದ, ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆಗೊಳಿಸುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share this Story:

Follow Webdunia kannada