Webdunia - Bharat's app for daily news and videos

Install App

ವೀರ ಸಾವರ್ಕರ ಮಾಂಸ ತಿನ್ನುತ್ತಿದ್ದ ಬ್ರಾಹ್ಮಣ: ವಿವಾದ ಸೃಷ್ಟಿಸಿದ ಸಚಿವ ದಿನೇಶ್ ಗುಂಡೂರಾವ್

Krishnaveni K
ಗುರುವಾರ, 3 ಅಕ್ಟೋಬರ್ 2024 (13:37 IST)
ಬೆಂಗಳೂರು: ಕ್ರಾಂತಿಕಾರಿ ನಾಯಕ, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರು ಒಬ್ಬ ಬ್ರಾಹ್ಮಣ. ಆದರೆ ಮಾಂಸಾಹಾರ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೂ ವಿರೋಧವಾಗಿರಲಿಲ್ಲ ಎಂದು ಗಾಂಧಿ ಜಯಂತ್ರಿ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಿತ ಮಾತುಗಳನ್ನಾಡಿದ್ದಾರೆ.

ಅವರ ಈ ಹೇಳಿಕೆಗೆ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಅವರು ಮಾಡರ್ನ್ ಆಗಿದ್ದರು. ಗೋಮಾಂಸವನ್ನೂ ಸೇವಿಸುತ್ತಿದ್ದರು ಎಂದು ಜನ ಹೇಳುತ್ತಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರಸೇವನೆ ಮಾಡಲು ಹೇಳುತ್ತಿದ್ದರು ಎಂದಿದ್ದಾರೆ.

ಇನ್ನು, ದಿನೇಶ್ ಗುಂಡೂರಾವ್ ಹೇಳಿಕೆ ವೈರಲ್ ಆಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, ಕಾಂಗ್ರೆಸ್ ನವರಿಗೆ ಹಿಂದೂಗಳ ಟೀಕೆಯೇ ಧರ್ಮವಾಗಿದೆ ಎಂದಿದ್ದಾರೆ. ಸಾವರ್ಕರ್ ಸತ್ತು ಸ್ವರ್ಗದಲ್ಲಿದ್ದಾರೆ. ಅವರನ್ನಾದರೂ ಬಿಡಿ. ಹೆಣ್ಣು ಮಕ್ಕಳು ಬಳೆಯೂ ಹಾಕಬಾರದು ಎಂಬ ಸ್ಥಿತಿಗೆ ಕಾಂಗ್ರೆಸ್ ಬರುತ್ತದೆ. ನಿಮ್ಮ ಟೀಕೆ ಏನಿದ್ದರೂ ಹಿಂದೂಗಳ ಬಗ್ಗೆ ಮಾತ್ರ. ಮುಸ್ಲಿಮರ ಬಗ್ಗೆ ಏನಾದರೂ ಮಾತನಾಡುತ್ತೀರಾ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments