Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಎಸ್‌ಎಂಕೆಗೆ ಅಭಿನಂದನೆ: ದಿನೇಶ್ ಗುಂಡೂರಾವ್

ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಎಸ್‌ಎಂಕೆಗೆ ಅಭಿನಂದನೆ: ದಿನೇಶ್ ಗುಂಡೂರಾವ್
ಬೆಂಗಳೂರು , ಗುರುವಾರ, 13 ಏಪ್ರಿಲ್ 2017 (15:25 IST)
ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದರಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ.  
 
ಪಕ್ಷಾಂತರಿಗಳಿಗೆ ಮತದಾರರು ಮನ್ನಣೆ ನೀಡುವುದಿಲ್ಲ ಎನ್ನುವುದು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾದವರಿಗೆ ಇದೀಗ ಅರಿವಿಗೆ ಬಂದಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ  ಸೇರಿದಂತೆ ಕೆಲ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿ ಪಕ್ಷಕ್ಕೆ ಬಲ ತಂದುಕೊಡುವ ಪ್ರಯತ್ನ ಮಾಡಿದ್ದರು. ಆದರೆ, ಅವರ ನಿರೀಕ್ಷೆಗಳನ್ನು ತಲೆಕೆಳಗಾಗಿಸಿದ್ದಾನೆ ಎಂದು ತಿಳಿಸಿದ್ದಾರೆ. 
 
ಕಾಂಗ್ರೆಸ್ ಪಕ್ಷದ ಜಾತ್ಯಾತೀತ ನಿಲುವನ್ನು ಮೆಚ್ಚಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಮೋಸದ ಮಾತುಗಳಿಗೆ ಜನಬೆಂಬಲ ನೀಡುವುದಿಲ್ಲ ಎಂದು ಗುಡುಗಿದರು.
 
ಜಾತಿ ಆಧಾರದ ಮೇಲೆ ಚುನಾವಣೆ ಗೆದ್ದಿಲ್ಲ. ಜನರೇ ತಕ್ಕ ಉತ್ತರ ನೀಡಿದ್ದಾರೆ. ಇನ್ನು ಮುಂದೆ ಕೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮತದಾರರು ನಮ್ಮ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಅಂದ್ರು.
 
ಕಾಂಗ್ರೆಸ್ ಜಯಭೇರಿ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿ ಧರ್ಮವನ್ನು ಒಡೆದು ಮತ ಗಿಟ್ಟಿಸಿಲ್ಲ: ಜಿ.ಪರಮೇಶ್ವರ್