Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳಕ್ಕೆ ಕಾರಣ ನೀಡಿದ ದಿನೇಶ್ ಗುಂಡೂರಾವ್‌

Sampriya
ಗುರುವಾರ, 21 ನವೆಂಬರ್ 2024 (18:56 IST)
Photo Courtesy X
ಬೆಂಗಳೂರು:  ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವುದು ಆಸ್ಪತ್ರೆಗಳ ಅಭಿವೃದ್ಧಿಗೆ ಹೊರೆತು ಬಿಜೆಪಿ ನಾಯಕರ ಸುಳ್ಳುಗಳಂತೆ ಗ್ಯಾರಂಟಿ ಯೋಜನೆಗಳಿಗಲ್ಲ. ಸರ್ಕಾರದ ಎಲ್ಲಾ ದರ ಪರಿಷ್ಕರಣೆಗಳಿಗೂ ಗ್ಯಾರಂಟಿ ಯೋಜನೆಗಳ ಜೊತೆಗೆ ತಳುಕು ಹಾಕುವುದು ಬಿಜೆಪಿ ನಾಯಕರಿಗೆ ಮಾಮೂಲಿ ಕೆಲಸವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ:  ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವುದು ಆಸ್ಪತ್ರೆಗಳ ಅಭಿವೃದ್ಧಿಗೆ ಹೊರೆತು ಬಿಜೆಪಿ ನಾಯಕರ ಸುಳ್ಳುಗಳಂತೆ ಗ್ಯಾರಂಟಿ ಯೋಜನೆಗಳಿಗಲ್ಲ. ಸರ್ಕಾರದ ಎಲ್ಲಾ ದರ ಪರಿಷ್ಕರಣೆಗಳಿಗೂ ಗ್ಯಾರಂಟಿ ಯೋಜನೆಗಳ ಜೊತೆಗೆ ತಳುಕು ಹಾಕುವುದು
ಬಿಜೆಪಿ ನಾಯಕರಿಗೆ ಮಾಮೂಲಿ ಕೆಲಸವಾಗಿದೆ.

ರಾಜ್ಯದಲ್ಲಿ ಹಲವು ವರ್ಷಗಳ ಬಳಿಕ ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿದೆ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಹಣ ಆಸ್ಪತ್ರೆಗಳ ʼಆರೋಗ್ಯ ರಕ್ಷಾ ಸಮಿತಿʼಗೆ ಸೇರಲಿದೆ. ಈ ಸೇವಾ ಶುಲ್ಕ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆಯಾಗಲಿದೆ. ಅಲ್ಪ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಸೇವಾ ಶುಲ್ಕ ರಾಜ್ಯದ ಜನತೆಗೆ ಹೊರೆಯಾಗುವುದಿಲ್ಲ.

ಆದರೂ, ಬಿಜೆಪಿ ನಾಯಕರು ಮಾತ್ರ ಎಲ್ಲಾ ವಿಚಾರಗಳಿಗೂ ಗ್ಯಾರಂಟಿ ಯೋಜನೆಗಳನ್ನೆ ಮುಂದಕ್ಕೆ ತರುತ್ತಿದ್ದಾರೆ. ಜನರಿಂದ ಪ್ರಶಂಸೆಗೆ ಒಳಗಾಗಿರುವ ಈ ಯೋಜನೆಗಳ ಬಗ್ಗೆ ಸುಳ್ಳು, ಅಪಪ್ರಚಾರ ನಡೆಸುವುದನ್ನೇ ಮುಖ್ಯ ಗುರಿಯಾಗಿಸಿಕೊಂಡಿದ್ದಾರೆ ಬಿಜೆಪಿ ನಾಯಕರು. ಆದರೆ, ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಅನುದಾನಗಳು, ನಬಾರ್ಡ್‌ನಿಂದ ರೈತರಿಗೆ ಬರಬೇಕಾದ ಹಣದ ಕುರಿತು ತುಟಿ ಬಿಚ್ಚುವುದಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments