BJP ವಿರುದ್ಧ ದಿನೇಶ್​​​ ಗುಂಡೂರಾವ್​​​ ವಾಗ್ದಾಳಿ

Webdunia
ಸೋಮವಾರ, 10 ಅಕ್ಟೋಬರ್ 2022 (19:41 IST)
AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೇಲಿರುವಷ್ಟು ಭಯ BJP ನಾಯಕರಿಗೆ ಬೇರೆ ಯಾರ ಮೇಲೂ ಇಲ್ಲ ಎಂದು 
KPCC ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿಯವರನ್ನು ಕೆಟ್ಟದಾಗಿ ಬಿಂಬಿಸಲು BJP ಕೋಟ್ಯಂತರ ಹಣ ವ್ಯಯಿಸುತ್ತಿರುವುದು ಅಕ್ಷರಶಃ ಸತ್ಯ. ಬಹುಶಃ ಬಿಜೆಪಿಯವರಿಗೆ ರಾಹುಲ್ ಗಾಂಧಿಯವರ ಮೇಲಿರುವ ಭಯ ಇನ್ಯಾರ ಮೇಲೂ ಇಲ್ಲ. ಆ ಭಯದಿಂದಲೇ, ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸ ಬಿಜೆಪಿಯ ಟ್ರೋಲ್ ಪೇಜ್‌ಗಳು, ಫೇಕ್ ಫ್ಯಾಕ್ಟರಿಗಳು ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಗಾಂಧಿಯವರಷ್ಟು ನಿರಂತರ ಅಪಮಾನ ಹಾಗೂ ಸುಳ್ಳು ಆರೋಪಗಳಿಗೆ ಗುರಿಯಾದವರಿಲ್ಲ. ನೇರವಾದ ಮರಕ್ಕೆ ಕೊಡಲಿ ಪೆಟ್ಟು ಜಾಸ್ತಿ ಎಂಬಂತೆ, ರಾಹುಲ್‌ರವರ ನೇರವಂತಿಕೆ ಹಾಗೂ ಎಲ್ಲರನ್ನೂ ಒಳಗೊಳ್ಳುವಿಕೆಯ ಪ್ರೀತಿಯ ವ್ಯಕ್ತಿತ್ವ ಬಿಜೆಪಿಯವರ ನಿದ್ದೆಗೆಡಿಸಿದೆ. ದ್ವೇಷಕಾರುವ ಬಿಜೆಪಿಯವರಿಗೆ ಪ್ರೀತಿಯ ರಾಯಭಾರಿ ಆಗಿರುವ ರಾಹುಲ್ ಕಂಡರೆ ಹೆದರಿಕೆ ಸಹಜ ಎಂದು ಹೇಳಿದ್ದಾರೆ. BJPಯವರು ತಮ್ಮ ವಿರುದ್ದ ಎಷ್ಟೇ ಅಪಪ್ರಚಾರ ಮಾಡಿದರೂ, ಅದೆಷ್ಟೇ ಅಪಹಾಸ್ಯ ಮಾಡಿದರೂ ರಾಹುಲ್​​ ಗಾಂಧಿಯವರು ಎದೆಗುಂದಿಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments