Webdunia - Bharat's app for daily news and videos

Install App

ಸಭಾಪತಿಗೆ ನಿವೇಶನ ನೀಡದಿರುವುದು ಒಳ್ಳೆಯ ಕ್ರಮವಲ್ಲ: ದಿನೇಶ್ ಗುಂಡೂರಾವ್

Webdunia
ಸೋಮವಾರ, 6 ಸೆಪ್ಟಂಬರ್ 2021 (10:31 IST)
ಬೆಂಗಳೂರು, ಸೆ.06 :  ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರ ನಿವೇಶನ ನೀಡದಿರುವುದು ಒಳ್ಳೆಯ ಕ್ರಮವಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು ಸಭಾಪತಿ ಸ್ಥಾನಕ್ಕೆ ಅದರದ್ದೇ ಆದ ಘನತೆ, ಗೌರವವಿದೆ. ಅವರಿಗೆ ಸರ್ಕಾರ ನಿವೇಶನ ನೀಡದಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸ್ವತಃ ಸಭಾಪತಿಯವರೇ ನಿವಾಸ ಕೇಳುವುದು ಮುಜುಗರದ ಸನ್ನಿವೇಶ. ಸರ್ಕಾರ ಕೂಡಲೇ ಸಭಾಪತಿ ಹೊರಟ್ಟಿ ಅವರಿಗೆ ನಿವಾಸ ಮಂಜೂರು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಭಾಪತಿ ಹೊರಟ್ಟಿ ಅವರು ತಮಗೆ ಸರ್ಕಾರ ನಿವಾಸ ನೀಡಿಲ್ಲ ಎಂದು ಪತ್ರ ಬರೆದಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಹಲವಾರು ಬಾರಿ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಸರ್ಕಾರ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ ಎಂದು ಕೂಡ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments