Webdunia - Bharat's app for daily news and videos

Install App

ನನಗೆ ಮದುವೆಯಾಗಿ ಹಲವು ವರ್ಷ ಕಳೆದಿವೆ, ನಿಮಗೆ ಮದುವೆಯಾಗುವ ಅವಕಾಶ ಇದೆ: ಶೋಭಾ ಕರಂದ್ಲಾಜೆಗೆ ದಿನೇಶ್ ತಿರುಗೇಟು

Webdunia
ಬುಧವಾರ, 12 ಜುಲೈ 2017 (19:21 IST)
ದಲಿತ ಯುವತಿ ನನಗೆ ಇಷ್ಟವಾಗಿದ್ದರೆ ಅವರನ್ನೇ ಮದುವೆಯಾಗುತ್ತಿದ್ದೆ. ನನಗೆ ಯಾವುದೇ ಕಟ್ಟುಪಾಡುಗಳಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೆಶ್ ಗುಂಡೂರಾವ್ ಸಂಸದೆ ಶೋಭಾ ಕರಂದ್ಲಾಜೆಗ ತಿರುಗೇಟು ನೀಡಿದ್ದಾರೆ.

ನಿಮಗೆ ದಲಿತರ ಬಗ್ಗೆ ಪ್ರೀತಿ ಇದ್ದರೆ ನಿಮ್ಮ ಮನೆಯ ಹೆಣ್ಣುಮಕ್ಕಳನ್ನ ಅವರಿಗೆ ಕೊಡಿ, ಅವರ ಮನೆಯಿಂದ ಹೆಣ್ಣುಮಕ್ಕಳ ಮದುವೆ ಮಾಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ, ನಿಮ್ಮ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರು ದಲಿತರನ್ನ ಮದುವೆಯಾಗಿದ್ದಾರಾ ಎಂದು ಪ್ರಶ್ನಿಸಿದ್ದರು.

ಶೋಭಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ನಾನು ಹಿಂದು, ಮುಸ್ಲಿಂ ಹುಡುಗಿಯನ್ನ ಮದುವೆಯಾಗಿದ್ದೇನೆ. ಅದೇನು ಕಾನೂನು ಬಾಹಿರವೇ..? ದಲಿತ ಮಹಿಳೆ ಇಷ್ಟವಾಗಿದ್ದರೆ ಅವರನ್ನೇ ಮದುವೆಯಾಗುತ್ತಿದ್ದೆ. ನನಗೆ ಯಾವುದೇ ಭೇದ ಭಾವವಿಲ್ಲ. ನನಗೆ ಮದುವೆಯಾಗಿ 20 ವರ್ಷಗಳೇ ಕಳೆದಿವೆ. ನಿಮಗೆ ಅವಕಾಶವಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments