Select Your Language

Notifications

webdunia
webdunia
webdunia
webdunia

ದಿನೇಶ್ ಗುಂಡೂರಾವ್ ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ

ದಿನೇಶ್ ಗುಂಡೂರಾವ್ ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ
ಬೆಂಗಳೂರು , ಬುಧವಾರ, 11 ಜುಲೈ 2018 (09:18 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಹಾಜರಿರಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಇದುವರೆಗೆ ಕಾರ್ಯ ನಿರ್ವಹಿಸಿದ್ದ ದಿನೇಶ್ ಗುಂಡೂರಾವ್ ಅವರನ್ನು ಮೊನ್ನೆಯಷ್ಟೇ ಅಧ್ಯಕ್ಷರಾಗಿ ನೇಮಕ ಮಾಡಿ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದರು. ಇದೀಗ ಕಾರ್ಯಾಧ್ಯಕ್ಷ ಹುದ್ದೆ ಆಯ್ಕೆ ನಡೆಯಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿಗೆ ಬಂದ ಮಹಾದಾಯಿ ಹೋರಾಟಗಾರರಿಂದ ಸರ್ಕಾರಕ್ಕೆ ಎಚ್ಚರಿಕೆ