ಆಗಸ್ಟ್ 13ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭ!

Webdunia
ಬುಧವಾರ, 28 ಜುಲೈ 2021 (08:38 IST)
ನವದೆಹಲಿ(ಜು.28): ದಶಕಗಳಿಂದ ಬೆಳಗಾವಿ ಜನರು ದೆಹಲಿಗೆ ನೇರ ವಿಮಾನ ಸೇವೆ ಕನಸು ಕಾಣುತ್ತಿದ್ದರು. ಇದೀಗ ಗಡಿನಾಡ ಕನ್ನಡಿಗರ ಕನಸು ನನಸಾಗಿದೆ. ಬೆಳಗಾವಿಯಿಂದ ದೆಹೆಲಿಗೆ ನೇರ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ. ಇದೇ ಆಗಸ್ಟ್ 13 ರಿಂದ ಸ್ಪೈಸ್ಜೆಟ್ ವಿಮಾನ ಸೇವೆ ಆರಂಭಗೊಳ್ಳುತ್ತಿದೆ.

•ಬೆಳಗಾವಿ ಜನರ ದಶಕದ ಕನಸು ನನಸು, ವಿಮಾನಯಾನ ಆರಂಭ
•ಅ.13ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ
•ವಿಮಾನ ಸೇವೆ ಘೋಷಿಸಿದ ಸ್ಪೈಸ್ಜೆಟ್

ಬೆಳಗಾವಿ ವಿಮಾನ ನಿಲ್ದಾಣದಿಂದ ನೇರ ವಿಮಾನಯಾನಕ್ಕೆ ಅಲ್ಲಿನ ಸಂಸದರು, ಶಾಸಕರು, ಮಂತ್ರಿಗಳು ಸೇರಿದಂತೆ ಉದ್ಯಮಿಗಳು, ನಾಗರೀಕರು ಬೇಡಿಕೆ ಇಟ್ಟಿದ್ದರು.  ವ್ಯಾಪಾರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ವಾಯುಪಡೆ, MLIRC,  AEQUS ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಸಾಮ್ಯದ ಸಂಸ್ಥೆಗಳು ಬೆಳವಾಗಿಯಲ್ಲಿದೆ. ಹೀಗಾಗಿ ದೆಹಲಿಗೆ ನೆರ ವಿಮಾನದ ಅವಶ್ಯಕತೆ ಹೆಚ್ಚಾಗಿತ್ತು.

ಬೇಡಿಕೆಗೆ ಸ್ಪಂದಿಸಿದ ಸ್ಪೈಸ್ಜೆಟ್ ಇದೀಗ, ಸೋಮವಾರ ಹಾಗೂ ಶುಕ್ರವಾರ  ವಾರದಲ್ಲಿ ಎರಡು ದಿನ ಬೆಳಗಾವಿಯಿಂದ ನೇರವಾಗಿ ದೆಹಲಿಗೆ ವಿಮಾನ ಸೇವೆ ಆರಂಭಿಸುತ್ತಿದೆ.  149 ಪ್ರಯಾಣಿಕರನ್ನು ಸಾಗಿಸಬಲ್ಲ ಸಾಮರ್ಥ್ಯದ ಬೋಯಿಂಗ್ 737 ವಿಮಾನ, ಬೆಳವಾಗಿಯಿಂದ ದೆಹಲಿಗೆ ಹಾರಾಟ ನಡೆಸಲಿದೆ.
ದೆಹಲಿಯಿಂದ ಬೋಯಿಂಗ್ 737 ಸ್ಪೈಸ್ಜೆಟ್ ವಿಮಾನ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಜೆ 4.35ಕ್ಕೆ ಆಗಮಿಸಲಿದೆ. ಇನ್ನು ಸಂಜೆ 5.05ಕ್ಕೆ ಬೆಳಗಾವಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹಾರಲಿದೆ.
ಸದ್ಯ ಬೆಳವಾಗಿ ವಿಮಾನ ನಿಲ್ದಾಣದಿಂದ ದೇಶದ 12 ಪ್ರಮುಖ ನಗರಗಳಿಗೆ ವಿಮಾನ ಸೇವೆ ಲಭ್ಯವಿದೆ. ಬೆಂಗಳೂು, ಮೈಸೂರು, ಕಡಪಾ, ತಿರುಪತಿ, ಮುಂಬೈ, ಪುಣೆ, ಅಹಮ್ಮದಾಬಾದ್, ನಾಸಿಕ್, ಹೈದರಾಬಾದ್, ಇಂದೋರ್, ಸೂರತ್ ಹಾಗೂ ಜೋಧಪುರಕ್ಕೆ ವಿಮಾನ ಸೇವೆ ಲಭ್ಯವಿದೆ. ಇದೀಗ ದೆಹಲಿ ಕೂಡ ಸೇರಿಕೊಂಡಿದೆ. ಅಲೈಯನ್ಸ್ ಏರ್, ಸ್ಪೈಸ್ ಜೆಟ್, ಸ್ಟಾರ್ ಏರ್, ಇಂಡಿಗೊ ಮತ್ತು ಟ್ರೂಜೆಟ್ ವಿಮಾನ ಸೇವೆ ನೀಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments