Webdunia - Bharat's app for daily news and videos

Install App

ಪೊಲೀಸ್ ನೇರ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Webdunia
ಮಂಗಳವಾರ, 16 ಜೂನ್ 2020 (19:55 IST)
2020-21ನೇ ಸಾಲಿನ  ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಕಾನ್ಸ್‍ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು.

ಅದರ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇದನ್ನು ಗಮನಿಸಬೇಕೆಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಿ.ಪಿ.ಸಿ. (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) 558 ಹುದ್ದೆಗಳಿಗೆ ಹಾಗೂ ಎ.ಪಿ.ಸಿ. (ಪುರುಷ) (ಸಿಎಆರ್/ಡಿಎಆರ್) (ಕಲ್ಯಾಣ ಕರ್ನಾಟಕ) 444 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 22 ರ ಬದಲಾಗಿ ಜುಲೈ 9 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಶುಲ್ಕ ಪಾವತಿಗೆ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 25 ರ ಬದಲಾಗಿ ಜುಲೈ 13 ರವರೆಗೆ ವಿಸ್ತರಿಸಲಾಗಿದೆ.

ಸಿ.ಪಿ.ಸಿ. (ಪುರುಷ ಮತ್ತು ಮಹಿಳೆ) 2007 ಹುದ್ದೆಗಳಿಗೆ ಮತ್ತು  ಎ.ಪಿ.ಸಿ. (ಪುರುಷ) (ಸಿಎಆರ್/ಡಿಎಆರ್) 1005 ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 22 ರ ಬದಲಾಗಿ ಜುಲೈ 13 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಶುಲ್ಕ ಪಾವತಿಗೆ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 25 ರ ಬದಲಾಗಿ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಸ್ಪೇ.ಆರ್.ಪಿ.ಸಿ. (ಪುರುಷ ಮತ್ತು ಮಹಿಳಾ) (ಕೆ.ಎಸ್.ಆರ್.ಸಿ ಮತ್ತು ಐ.ಆರ್.ಬಿ.) 2420 ಹುದ್ದೆಗಳಿಗೆ ಹಾಗೂ ಸ್ಟೇ.ಆರ್.ಪಿ.ಸಿ. (ಪುರುಷ) ಬ್ಯಾಂಡ್ಸ್‍ಮನ್ (ಕೆ.ಎಸ್.ಆರ್.ಪಿ. ಮತ್ತು ಐ.ಆರ್.ಬಿ.) 252 ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 15 ರ ಬದಲಾಗಿ ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಶುಲ್ಕ ಪಾವತಿಗೆ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಜೂನ್ 18 ರ ಬದಲಾಗಿ ಜುಲೈ 8 ರವರೆಗೆ ವಿಸ್ತರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments