Select Your Language

Notifications

webdunia
webdunia
webdunia
webdunia

ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮ

ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮ
ಬೆಂಗಳೂರು , ಬುಧವಾರ, 29 ಜೂನ್ 2022 (13:11 IST)
ಬೆಂಗಳೂರು : ಕಾಂಗ್ರೆಸ್ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮದ ಬಿಸಿ ಮುಟ್ಟಿಸಲು ವೇದಿಕೆ ಸಿದ್ಧವಾಗತೊಡಗಿದೆ ಎನ್ನಲಾಗುತ್ತಿದೆ.
 
ನಾಳೆ ಕಾಂಗ್ರೆಸ್ ಶಿಸ್ತು ಪಾಲನ ಸಮಿತಿ ಸಭೆ ನಡೆಯುವ ಸಾಧ್ಯತೆ ಇದೆ. ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದ ಶಿಸ್ತುಪಾಲನ ಸಮಿತಿ ಸಭೆ ನಡೆಸುವ ಸಾಧ್ಯತೆ ಇದೆ.

ಊಟಿಯಲ್ಲಿರುವ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಬರುತ್ತಿದಂತೆ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೆಹಮಾನ್ ಖಾನ್ ಅವರಿಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ.

ಮಾಜಿ ಸಚಿವ ಸೀತಾರಾಂ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ಗೆ ಶೋಕಾಸ್ ನೋಟಿಸ್ ಜಾರಿ ಸಾಧ್ಯತೆಯಿದೆ. ತಮ್ಮ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಪಕ್ಷದ ನಾಯಕರ ವಿರುದ್ಧ ಮಾತನಾಡಿದ್ದ ಎಂ.ಆರ್.ಸೀತಾರಾಂ, ಅದೇ ಸಭೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ್ ಭಾಗವಹಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ ?