Select Your Language

Notifications

webdunia
webdunia
webdunia
webdunia

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ  ಕನ್ನಡ ಪುಸ್ತಕ ರಿಯಾಯಿತಿ ಮಾರಾಟ
bangalore , ಶನಿವಾರ, 30 ಅಕ್ಟೋಬರ್ 2021 (20:44 IST)
ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಅಕ್ಟೋಬರ್ ೨೯ ರಿಂದ ನವೆಂಬರ್ ೦೨ರವರೆಗೆ ಐದು ದಿನಗಳ ಕಾಲ ಕರ್ನಾಟಕ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮಹೋತ್ಸವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಒಟ್ಟು 130 ಮಳಿಗೆಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳೂ ಸೇರಿದಂತೆ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ಹಾಗೂ ಖಾಸಗಿ ಪ್ರಕಾಶಕರ ಪುಸ್ತಕಗಳ ರಿಯಾಯಿತಿ ಮಾರಾಟ ಮಾಡಲಾಗುತ್ತಿದೆ. ಇದರ ಜೊತೆ ಶಿಲ್ಪಕಲೆ ಮತ್ತು ಚಿತ್ರಕಲೆಗಳ ಪ್ರದರ್ಶನ ಮತ್ತು ರಿಯಾಯಿತಿ ಮಾರಾಟ, ಜಾನಪದ / ಯಕ್ಷಗಾನ ಕಲೆಯ ಪರಿಕರಗಳ ಪ್ರದರ್ಶನ ಹಾಗೂ ದೇಸೀ ಉಡುಪುಗಳ ಮತ್ತು ದೇಸೀ ಆಹಾರಗಳ ಮಾರಾಟ ಇರುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಲಾಸಕ್ತರು ಹಾಗೂ ಸಾರ್ವಜನಿಕರು ಈ ರಿಯಾಯಿತಿ ಮೇಳದಲ್ಲಿ ಭಾಗವಹಿಸಲು ಕೋರಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ