Publish Date: Tue, 25 Sep 2018 (19:06 IST)
Updated Date: Tue, 25 Sep 2018 (19:08 IST)
ಬೆಂಗಳೂರು : ತಮ್ಮ ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ. ತಾರತಮ್ಯ ಮಾಡಲಾಗುತ್ತಿದೆ ಎಂದು ಶಾಸಕ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕಾಂಗ ಸಭೆಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನನಗೆ ಯಾವ ಭರವಸೆಯನ್ನೂ ನೀಡಿಲ್ಲ. ಹೈಕಮಾಂಡ್ ಇದೆ ಮಾತನಾಡೋಣ ಎಂದಿದ್ದಾರೆ. ನನಗೆ ಅಸಮಾಧಾನ ಇರುವುದು ನಿಜ. ಮುಂದೆ ನೋಡಣ ಎಂದು ಹೇಳಿದ್ದಾರೆ.
ನಮ್ಮ ಕ್ಷೇತ್ರ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರ ಇದೆ. ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ, ತಾರತಮ್ಯ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.