Webdunia - Bharat's app for daily news and videos

Install App

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೈ.ಕ.ಪ್ರ.ಅ.ಮಂಡಳಿ ರೂಪರೇಷೆಗಳ ಚರ್ಚೆ

Webdunia
ಭಾನುವಾರ, 25 ನವೆಂಬರ್ 2018 (16:35 IST)
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಬಿ. ಪಾಟೀಲ ಹೇಳಿದರು.

ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಕರೆದ ಸಭೆಯನ್ನುದ್ದೇಶಿಸಿ ಮಾತನಾಡಿ, ಹೆಚ್.ಕೆ.ಆರ್.ಡಿ.ಬಿ.ಗೆ ಸರ್ಕಾರ ಅನುಮೋದಿಸಿರುವ ಹಾಗೂ ಬಿಡುಗಡೆಯಾಗಿರುವ ಅನುದಾನದ ಹಾಗೂ ಮಂಡಳಿಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಹೈ.ಕ.ಪ್ರ.ಅ.ಮಂಡಳಿಯಿಂದ 2014-15 ರಿಂದ ಇಲ್ಲಿಯವರೆಗೆ ಬಿಡುಗಡೆಯಾದ ಅನುದಾನಕ್ಕೆ ತಕ್ಕಂತೆ ಕಾಮಗಾರಿಗಳನ್ನು ಪಾರದರ್ಶಕವಾಗಿ ಕೈಗೊಳ್ಳಲಾಗಿದೆ. ನಂಜುಂಡಪ್ಪ ವರದಿ ಅನುಸಾರ ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳಲ್ಲಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮುಂದೆ   ಮೈಕ್ರೋ ಅಥವಾ ಮ್ಯಾಕ್ರೋ ಯೋಜನೆಯಡಿಯಲ್ಲಿ ಯಾವುದೇ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು. ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು. ಕಾಮಗಾರಿಗಳು ಬೇಗ ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕರು ಕ್ರಿಯಾ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಮಂಡಳಿಗೆ ಸಲ್ಲಿಸಬೇಕು. ಈ ಸಭೆಯಲ್ಲಿ ಸದಸ್ಯರು ಕೇಳಿರುವ ಪ್ರಶ್ನೆಗಳನ್ನು ದಾಖಲಿಸಲಾಗಿದ್ದು, 2-3 ದಿನಗಳಲ್ಲಿ ಉತ್ತರಿಸಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments