Select Your Language

Notifications

webdunia
webdunia
webdunia
webdunia

ಮೋದಿ ಭೇಟಿಯಿಂದ ʼಕೈʼ ನಾಯಕರಿಗೆ ಭ್ರಮನಿರಸನ : ಬೊಮ್ಮಾಯಿ

ಮೋದಿ ಭೇಟಿಯಿಂದ ʼಕೈʼ ನಾಯಕರಿಗೆ ಭ್ರಮನಿರಸನ : ಬೊಮ್ಮಾಯಿ
ಹುಬ್ಬಳ್ಳಿ , ಮಂಗಳವಾರ, 28 ಫೆಬ್ರವರಿ 2023 (15:31 IST)
ಹುಬ್ಬಳ್ಳಿ : ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ.
 
ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ.

ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಭಾಗ್ಯ