Webdunia - Bharat's app for daily news and videos

Install App

ಭಿನ್ನಮತ ಸ್ಫೋಟ: ಬಿ.ಎಸ್,.ಯಡಿಯೂರಪ್ಪ ಕರೆದ ಸಭೆಗೆ ಈಶ್ವರಪ್ಪ ಗೈರು

Webdunia
ಶನಿವಾರ, 2 ಜುಲೈ 2016 (13:22 IST)
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆದ ಸಭೆಗೆ ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ನಿರೀಕ್ಷೆಯಂತೆ ಗೈರುಹಾಜರಾಗಿದ್ದಾರೆ.
 
ಕೋರ್ ಕಮಿಟಿಯಲ್ಲಿ ಚರ್ಚಿಸದೆ ಪದಾಧಿಕಾರಿಗಳ ನೇಮಕ ಮಾಡಿರುವುದು ಪಕ್ಷದ ನೀತಿಗಳಿಗೆ ವಿರುದ್ಧವಾಗಿದೆ. ಪದಾಧಿಕಾರಿಗಳ ನೇಮಕದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಈಶ್ವರಪ್ಪ ಬಹಿರಂಗವಾಗಿಯೇ ಗುಡುಗಿದ್ದರು.
 
ಯಡಿಯೂರಪ್ಪ ಬಿಜೆಪಿ ಅಧ್ಯಕ್ಷರಾದಾಗ ರಾಜ್ಯ ಬಿಜೆಪಿ ಸಂತಸಗೊಂಡಿತ್ತು. ಇದೀಗ ಅವರ ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಬಿಜೆಪಿ ಕಾರ್ಯಕರ್ತರು ನಮ್ಮನ್ನೇ ಟೀಕಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಈಶ್ವರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕ ಸಿ.ಟಿ.ರವಿ ಸೇರಿದಂತೆ ಅನೇಕ ಮುಖಂಡರು ಯಡಿಯೂರಪ್ಪ ಕರೆದ ಸಭೆಗೆ ಗೈರುಹಾಜರಾಗಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಚರ್ಚೆ ನಡೆಸಿದ್ದರು. ಅದರಂತೆ ಇಂದು ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಯಡಿಯೂರಪ್ಪ ಕರೆದ ಸಭೆಗೆ ಗೈರುಹಾಜರಾಗಿದ್ದಾರೆ.
 
ಯಾವುದೇ ಕಾರಣಕ್ಕೂ ಪದಾಧಿಕಾರಿಗಳ ನೇಮಕವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಈಶ್ವರಪ್ಪ ಕಿಡಿಕಾರಿದ್ದರೆ, ಯಾವುದೇ ಕಾರಣಕ್ಕೂ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments