Select Your Language

Notifications

webdunia
webdunia
webdunia
webdunia

ಹಿಜಾಬ್ ವಿವಾದ ರಾಷ್ಟ್ರ ಧ್ವಜಕ್ಕೆ ಅಪಮಾನ

ಹಿಜಾಬ್ ವಿವಾದ ರಾಷ್ಟ್ರ ಧ್ವಜಕ್ಕೆ ಅಪಮಾನ
ಬೆಂಗಳೂರು , ಮಂಗಳವಾರ, 8 ಫೆಬ್ರವರಿ 2022 (14:54 IST)
ಹಿಜಾಬ್ ವಿವಾದ ದಿನದಿಂದ ದಿನಕ್ಕೆ ರಾಜ್ಯದ ಹಲವೆಡೆ ವ್ಯಾಪಿಸುತ್ತಿದ್ದರೆ ಮತ್ತೊಂದೆಡೆ ಹಿಂಸಾರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದ್ದರೂ ನ್ಯಾಯಾಲಯದ ಮೇಲೆ ಹಾಕಿ ರಾಜ್ಯ ಸರಕಾರ ಜಾಣ ಕುರುಡು ಪ್ರದರ್ಶಿಸುತ್ತಿದೆ.
 
ಉಡುಪಿಯ ಶಾಲೆಯಲ್ಲಿ ಆರಂಭವಾದ ಸಣ್ಣಮಟ್ಟದ ಹಿಜಾಬ್ ವಿವಾದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಷ್ಟು ವಿಪರೀತಕ್ಕೆ ಹೋಗಿದೆ.
ಆಘಾತಕಾರಿ ಸಂಗತಿ ಎಂದರೆ ದೇಶಪ್ರೇಮ, ದೇಶಭಕ್ತಿಯ ಬಗ್ಗೆ ಪುಂಖಾನುಪುಂಖಾ ಭಾಷಣ ಮಾಡುವ ಕೇಸರಿ ಪಡೆಗಳ ಬೆಂಬಲಿತ ವಿದ್ಯಾರ್ಥಿಗಳು ಈ ಕೃತ್ಯ ಎಸಗಿರುವುದು.
 
ಶಿವಮೊಗ್ಗದಲ್ಲಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದಾನೆ. ಆತನ ಜೊತೆಗಿದ್ದ ಗುಂಪು ಇದನ್ನು ಸಂಭ್ರಮ ಎಂಬಂತೆ ಕುಣಿದು ಕುಪ್ಪಳಿಸಿವೆ. ಆದರೆ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಮತ್ತು ಯಾರನ್ನೂ ಬಂಧಿಸದೇ ಇರುವುದು ಪೊಲೀಸರ ದೌರ್ಬಲ್ಯ ಮತ್ತು ಇದರ ಹಿಂದೆ ಅಡಗಿರುವ ರಾಜಕೀಯ ಸೂಕ್ಷ್ಮತೆಯನ್ನು ತೋರಿಸುತ್ತದೆ.
 
ಇದರ ನಡುವೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಆಗಿದ್ದರೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ದಾವಣಗೆರೆಗೂ ಇದು ವ್ಯಾಪಿಸಿದ್ದು, ಜಿಲ್ಲಾಧಿಕಾರಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ಬಾಗಲಕೋಟೆ, ಕುಂದಾಪುರ, ಕೋಲಾರ, ಮಂಡ್ಯ ಮುಂತಾದೆಡೆ ಪರಿಸ್ಥಿತಿ ಕೈ ಮೀರುವ ಹಂತ ತಲುಪುತ್ತಿದೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ, ಘಟನೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಿ ಸಮಾಜದಲ್ಲಿ ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ವಿರೋಧ ಪಕ್ಷದ ನಾಯಕರಂತೆ ಆರೋಪ ಮಾಡುತ್ತಿರುವುದು ವಿಪರ್ಯಾಸ.
 
ಹಿಜಾಬ್ ಬೇಕು ಎಂದು ಪಟ್ಟು ಹಿಡಿಯುತ್ತಿರುವರು ಯುವತಿಯರು. ಆದರೆ ಅವರ ವಿರುದ್ಧ ತೊಡೆ ತಟ್ಟಿರುವುದು ಗಂಡು ಮಕ್ಕಳು. ಯುವತಿಯರು ಸಹಜವಾಗಿ ಮನೆಯ ವಸ್ತ್ರಗಳಲ್ಲೇ ಬಂದರೆ ಈ ಕೇಸರಿ ಶಾಲು, ಪೇಟಗಳನ್ನು ವಿದ್ಯಾರ್ಥಿಗಳಿಗೆ ಯಾರು ಪೂರೈಸುತ್ತಿದ್ದಾರೆ? 

Share this Story:

Follow Webdunia kannada

ಮುಂದಿನ ಸುದ್ದಿ

100 ರೂ.ಗಾಗಿ ಸಂಬಂಧಿಕನ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿದ ಭೂಪ!