Webdunia - Bharat's app for daily news and videos

Install App

ಹಿಜಾಬ್ ವಿವಾದ ರಾಷ್ಟ್ರ ಧ್ವಜಕ್ಕೆ ಅಪಮಾನ

Webdunia
ಮಂಗಳವಾರ, 8 ಫೆಬ್ರವರಿ 2022 (14:54 IST)
ಹಿಜಾಬ್ ವಿವಾದ ದಿನದಿಂದ ದಿನಕ್ಕೆ ರಾಜ್ಯದ ಹಲವೆಡೆ ವ್ಯಾಪಿಸುತ್ತಿದ್ದರೆ ಮತ್ತೊಂದೆಡೆ ಹಿಂಸಾರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದ್ದರೂ ನ್ಯಾಯಾಲಯದ ಮೇಲೆ ಹಾಕಿ ರಾಜ್ಯ ಸರಕಾರ ಜಾಣ ಕುರುಡು ಪ್ರದರ್ಶಿಸುತ್ತಿದೆ.
 
ಉಡುಪಿಯ ಶಾಲೆಯಲ್ಲಿ ಆರಂಭವಾದ ಸಣ್ಣಮಟ್ಟದ ಹಿಜಾಬ್ ವಿವಾದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಷ್ಟು ವಿಪರೀತಕ್ಕೆ ಹೋಗಿದೆ.
ಆಘಾತಕಾರಿ ಸಂಗತಿ ಎಂದರೆ ದೇಶಪ್ರೇಮ, ದೇಶಭಕ್ತಿಯ ಬಗ್ಗೆ ಪುಂಖಾನುಪುಂಖಾ ಭಾಷಣ ಮಾಡುವ ಕೇಸರಿ ಪಡೆಗಳ ಬೆಂಬಲಿತ ವಿದ್ಯಾರ್ಥಿಗಳು ಈ ಕೃತ್ಯ ಎಸಗಿರುವುದು.
 
ಶಿವಮೊಗ್ಗದಲ್ಲಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದಾನೆ. ಆತನ ಜೊತೆಗಿದ್ದ ಗುಂಪು ಇದನ್ನು ಸಂಭ್ರಮ ಎಂಬಂತೆ ಕುಣಿದು ಕುಪ್ಪಳಿಸಿವೆ. ಆದರೆ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಮತ್ತು ಯಾರನ್ನೂ ಬಂಧಿಸದೇ ಇರುವುದು ಪೊಲೀಸರ ದೌರ್ಬಲ್ಯ ಮತ್ತು ಇದರ ಹಿಂದೆ ಅಡಗಿರುವ ರಾಜಕೀಯ ಸೂಕ್ಷ್ಮತೆಯನ್ನು ತೋರಿಸುತ್ತದೆ.
 
ಇದರ ನಡುವೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಆಗಿದ್ದರೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ದಾವಣಗೆರೆಗೂ ಇದು ವ್ಯಾಪಿಸಿದ್ದು, ಜಿಲ್ಲಾಧಿಕಾರಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ಬಾಗಲಕೋಟೆ, ಕುಂದಾಪುರ, ಕೋಲಾರ, ಮಂಡ್ಯ ಮುಂತಾದೆಡೆ ಪರಿಸ್ಥಿತಿ ಕೈ ಮೀರುವ ಹಂತ ತಲುಪುತ್ತಿದೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ, ಘಟನೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಿ ಸಮಾಜದಲ್ಲಿ ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ವಿರೋಧ ಪಕ್ಷದ ನಾಯಕರಂತೆ ಆರೋಪ ಮಾಡುತ್ತಿರುವುದು ವಿಪರ್ಯಾಸ.
 
ಹಿಜಾಬ್ ಬೇಕು ಎಂದು ಪಟ್ಟು ಹಿಡಿಯುತ್ತಿರುವರು ಯುವತಿಯರು. ಆದರೆ ಅವರ ವಿರುದ್ಧ ತೊಡೆ ತಟ್ಟಿರುವುದು ಗಂಡು ಮಕ್ಕಳು. ಯುವತಿಯರು ಸಹಜವಾಗಿ ಮನೆಯ ವಸ್ತ್ರಗಳಲ್ಲೇ ಬಂದರೆ ಈ ಕೇಸರಿ ಶಾಲು, ಪೇಟಗಳನ್ನು ವಿದ್ಯಾರ್ಥಿಗಳಿಗೆ ಯಾರು ಪೂರೈಸುತ್ತಿದ್ದಾರೆ? 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments