Webdunia - Bharat's app for daily news and videos

Install App

ನಿಗಮ ಮಂಡಳಿ ನೇಮಕಾತಿಯಲ್ಲಿ ಅಸಮಾಧಾನ

geetha
ಶನಿವಾರ, 27 ಜನವರಿ 2024 (21:04 IST)
ಬೆಂಗಳೂರು :ನಿಗಮ ಮಂಡಳಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ದಲಿತ ಮತ್ತು ಒಕ್ಕಲಿಗ ಮುಖಂಡರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸಿದ್ದರಾಮಯ್ಯ ಬಣ ಹಾಗೂ ಡಿ.ಕೆ. ಶಿವಕುಮಾರ್‌ ಬಣದ ಮುಖಂಡರಿಗೆ ನಿಮಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗಿದೆ. ಇದು ಸಹಜವಾಗಿಯೇ ಇತರೆ ನಾಯಕರನ್ನು ಕೆರಳಿಸಿದೆ.

ನಿಗಮ ಮಂಡಳಿ ನೇಮಕಾತಿಯಲ್ಲಿ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ಗೃಹಸಚಿವ ಜಿ. ಪರಮೇಶ್ವರ್‌ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸದಾಶಿವನಗರದ ಡಿ.ಕೆ.ಶಿವಕುಮಾರ್‌ ಅವರ ಸ್ವಗೃಹದಲ್ಲಿ ಶನಿವಾರ ಭೇಟಿಯಾದ ಪರಮೇಶ್ವರ್‌ ನಿಗಮ ಮಂಡಳಿ ನೇಮಕಾತಿ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಹಿಂದೆ ನಿಗಮ ಮಂಡಳಿ ನೇಮಕಾತಿಯಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನನ್ನ ಬಳಿ ಯಾವುದೇ ಚರ್ಚೆ ನಡೆಸಿಲ್ಲ. ಹಿರಿಯನಾದ ನನ್ನನ್ನು ಕೇಳಿದ್ದರೆ ಚೆನ್ನಾಗಿತ್ತು ಎಂದು ಜಿ. ಪರಮೇಶ್ವರ್‌ ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments